6:45 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಶ್ರೀ ಮರುಳ ಸಿದ್ದ ಮಹಾಸ್ವಾಮಿ ಸನ್ಮಾನ: ಸಚಿವ ಸ್ಥಾನ ದೊರಕಲು ಆಶೀರ್ವಾದ

03/06/2023, 21:03

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಆಡಳಿತ ಕಾಂಗ್ರೆಸ್ ಪಕ್ಷದಿಂದ ನೂತನ ಶಾಸಕರಾಗಿ ಆಯ್ಕೆಯಾದ ಲಕ್ಷ್ಮಣ ಸವದಿ ಅವರಿಗೆ ಇಂದು ಅಥಣಿ ತಾಲೂಕಿನ ಶೆಟ್ಟರ್ ಮಠದ ಆವರಣದಲ್ಲಿ ಇಂದು ಶ್ರೀ ಮರುಳ ಸಿದ್ದ ಮಹಾಸ್ವಾಮಿಜಿ ಅವದು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಅವರು, ಇಡೀ ರಾಜ್ಯದಲ್ಲಿ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿ ರಾಜ್ಯದಲ್ಲಿ ಎರಡನೆ ಸ್ಥಾನದಲ್ಲಿ ಗುರುತಿಸಿ ಕೊಟ್ಟಿರುವ ಅಥಣಿ ತಾಲೂಕಿನ ಮಹಾ ಜನತೆ ಹಾಗೂ ಪೂಜ್ಯರುಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದಲ್ಲಿ ಅನೇಕ ಅಭಿವೃದ್ಧಿಯ ಕೆಲಸಗಳನ್ನ ಮಾಡುವದಿದ್ದು ಬರುವ ಸಂದರ್ಭದಲ್ಲಿ ತಮ್ಮೆಲ್ಲರ ಸಹಾಯ ಮತ್ತು ಸಹಕಾರ ನನಗೆ ಯಾವತ್ತೂ ಬೇಕು ಒಟ್ಟಿಗೆ ಸೇರಿ ಕ್ಷೇತ್ರವನ್ನು ಅಭಿವೃದ್ಧಿಯ ಪಥದತ್ತ ಸಾಗಿಸೋಣ ಎಂದು ಹೇಳಿದರು.
ಆಶೀರ್ವಚನ ನೀಡಿದ ಶೆಟ್ಟರ ಮಠದ ಶ್ರೀ ಮರುಳ ಶಿದ್ದ ಮಹಾಸ್ವಾಮಿಜಿಯವರೂ ತಾವು ಅಥಣಿ ಮತಕ್ಷೇತ್ರದಲ್ಲಿ ಹಲವು ಬಾರಿ ಜಯಶಾಲಿಯಾಗಿ ಒಳ್ಳೆ ರೀತಿಯಲ್ಲಿ ಕ್ಷೇತ್ರದ ಸೇವೆಯನ್ನು ಮಾಡಿದ್ದೀರಿ. ಮತ್ತೆ ನಿಮಗೆ ಶಿವಯೋಗಿಗಳ ಆಶೀರ್ವಾದ ದೊರಕಿದೆ. ಬರುವ ದಿನಗಳಲ್ಲಿ ತಮಗೆ ಮಂತ್ರಿ ಸ್ಥಾನ ದೊರಕಲಿ ಎಂದು ಆಶೀರ್ವದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು