11:27 PM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭ್ರಷ್ಟಾಚಾರ, ಲಂಚಾವತಾರ: ರೈತ ಮುಖಂಡರಿಂದ ವಿರೋಧ; ಹೋರಾಟದ ಎಚ್ಚರಿಕೆ

27/05/2023, 16:45

ರಾಹುಲ್ ಅಥಣಿ ಬೆಳಗಾವಿ

info.reporterkarnataka e-mail.com

ಬೆಳಗಾವಿ ಜಿಲ್ಲೆಯ ಅಥಣಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಭಾರೀ ಭ್ರಷ್ಡಾಚಾರದ ಆರೋಪ ಕೇಳಿ ಬರುತ್ತಿದೆ. ಇಲ್ಲಿ ಪ್ರತಿಯೊಂದು ಕೆಲಸಕ್ಕೂ 10ರಿಂದ 15 ಸಾವಿರ ಲಂಚ ಕೇಳುವುದು ಮಾಮೂಲಿಯಾಗಿ ಹೋಗಿದೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ.
ಸಬ್ ರಿಜಿಸ್ಟರ್ ಕಚೇರಿಯ ಲಂಚಾವತಾರ, ಭ್ರಷ್ಟಾಚಾರ ಕಂಡು ರೋಸಿ ಹೋದ ರೈತರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆಯೂ ನಡೆದಿದೆ. ಅಥಣಿ ಸಬ್ ರಿಜಿಸ್ಟ್ರಾರ್ ಕಲಾವತಿ ಮಾಲವಾಡಿ ಅವನ್ನು ರೈತ ಮುಖಂಡರು ತರಾಟೆ ತೆಗೆದುಕೊಂಡಿದ್ದಾರೆ. ಪ್ರತಿಯೊಂದು ನೋಂದಣಿಗೆ ಹೆಚ್ಚುವರಿಯಾಗಿ 15 ಸಾವಿರ ರೂ. ಅಧಿಕಾರಿಗೆ ಪಾವತಿಸಬೇಕು ಎಂಬ ಆರೋಪ ಕೇಳಿ ಬರುತ್ತಿದೆ. ಸಬ್ ರಿಜಿಸ್ಟರ್ ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ವಿಪರೀತವಾಗಿದೆ. ಅಧಿಕಾರಿಗಳ ಕುಮ್ಮಕ್ಕಿನಿಂದಲೇ ದಲ್ಲಾಳ್ಳಿಗಳು ಜಾಸ್ತಿಯಾಗಿದ್ದಾರೆ ಎಂದು ನಾಗರಿಕರು ಆರೋಪಿಸುತ್ತಾರೆ.


ಸಬ್ ರಿಜಿಸ್ಟರ್ ಕಚೇರಿ ಸಿಬ್ಬಂದಿಗಳು ದಲ್ಲಾಳಿಗಳ ಮೂಲಕ ವ್ಯವಹಾರ ಕುದುರಿಸಿಕೊಳ್ಳುತ್ತಿದ್ದಾರೆ. ಲಂಚ ಹಣ ದಲ್ಲಾಳಿಗಳ ಖಾತೆಗೆ ಬಂದು ಅಲ್ಲಿಂದ ಅಧಿಕಾರಿಗಳ ಖಾತೆಗೆ ವರ್ಗಾವಣೆಯಾಗುತ್ತದೆ ಎಂಬ ಮಾತು ಕೇಳಿ ಬರುತ್ತಿದೆ. ಇದರಿಂದ ಜನಸಾಮಾನ್ಯರು ಬೇಸತ್ರು ಹೋಗಿದ್ದಾರೆ.ವ್ಯವಸ್ಥೆ ಸರಿ ಹೊಂದದಿದ್ದರೆ ಉಗ್ರ ಹೋರಾಟ ಎಚ್ಚರಿಕೆ ನೀಡಿದ ರೈತ ಮುಖಂಡ ಮಹದೇವ ಮಡಿವಾಳ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು