11:19 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಥಣಿ: ತುಂಬಿ ಹರಿಯುತ್ತಿದ್ದ ಕರಿಮಸೂತಿ ಕಾಲುವೆಗೆ ಬಿದ್ದ 4 ಮಂದಿ ಮಕ್ಕಳು; 2  ಪುಟಾಣಿಗಳ ದಾರುಣ ಅಂತ್ಯ

10/10/2021, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಲುವೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಅಕಸ್ಮಾತ್ ಕಾಲು ಜಾರಿ ಕರಿಮಸೂತಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ.

ಗ್ರಾಮದ ಸರಕಾರಿ ಪ್ರೌಢ ಶಾಲೆ ಸಮೀಪ ಹಾದು ಹೋಗಿರುವ ಕರಿಮಸೂತಿ ಕಾಲುವೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳಾದ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8), ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಎಂಬ ನಾಲ್ವರು ಮಕ್ಕಳು ಆಟವಾಡಲು ಕಾಲುವೆ ಹತ್ತಿರ ಹೋಗಿ ಕಾಲುವೆಯಲ್ಲಿ ಬಿದ್ದಿದ್ದರು. ಇವರಲ್ಲಿ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8) ಇವರನ್ನು ಕಾಲುವೆಯಿಂದ ಬಚಾವ್ ಮಾಡಲಾಗಿದೆ. ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಇಬ್ಬರು ಸಾವನ್ನಪ್ಪಿದ್ದಾರೆ.


ಅಗ್ನಿಶಾಮಕ ದಳ ಸಿಬ್ಬಂದಿಯ ಸಹಾಯದಿಂದ ಎಲ್ಲರನ್ನು ಹೊರ ತಗೆಯುವಷ್ಟರಲ್ಲಿ ಇಬ್ಬರು ನೀರಿನಲ್ಲಿಯೇ ಸಾವನ್ನಪ್ಪಿದ್ದರು. ಈ ಕುರಿತು ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಮಕ್ಕಳು ಸಾವನ್ನಪಿದ ಘಟನೆಯನ್ನು ನೋಡಿ ಗ್ರಾಮಸ್ಥರ ಹಾಗೂ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು