12:08 AM Wednesday5 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಅಥಣಿ: ತುಂಬಿ ಹರಿಯುತ್ತಿದ್ದ ಕರಿಮಸೂತಿ ಕಾಲುವೆಗೆ ಬಿದ್ದ 4 ಮಂದಿ ಮಕ್ಕಳು; 2  ಪುಟಾಣಿಗಳ ದಾರುಣ ಅಂತ್ಯ

10/10/2021, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಲುವೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಅಕಸ್ಮಾತ್ ಕಾಲು ಜಾರಿ ಕರಿಮಸೂತಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ.

ಗ್ರಾಮದ ಸರಕಾರಿ ಪ್ರೌಢ ಶಾಲೆ ಸಮೀಪ ಹಾದು ಹೋಗಿರುವ ಕರಿಮಸೂತಿ ಕಾಲುವೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳಾದ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8), ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಎಂಬ ನಾಲ್ವರು ಮಕ್ಕಳು ಆಟವಾಡಲು ಕಾಲುವೆ ಹತ್ತಿರ ಹೋಗಿ ಕಾಲುವೆಯಲ್ಲಿ ಬಿದ್ದಿದ್ದರು. ಇವರಲ್ಲಿ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8) ಇವರನ್ನು ಕಾಲುವೆಯಿಂದ ಬಚಾವ್ ಮಾಡಲಾಗಿದೆ. ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಇಬ್ಬರು ಸಾವನ್ನಪ್ಪಿದ್ದಾರೆ.


ಅಗ್ನಿಶಾಮಕ ದಳ ಸಿಬ್ಬಂದಿಯ ಸಹಾಯದಿಂದ ಎಲ್ಲರನ್ನು ಹೊರ ತಗೆಯುವಷ್ಟರಲ್ಲಿ ಇಬ್ಬರು ನೀರಿನಲ್ಲಿಯೇ ಸಾವನ್ನಪ್ಪಿದ್ದರು. ಈ ಕುರಿತು ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಮಕ್ಕಳು ಸಾವನ್ನಪಿದ ಘಟನೆಯನ್ನು ನೋಡಿ ಗ್ರಾಮಸ್ಥರ ಹಾಗೂ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು