8:57 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಅಥಣಿ: ತುಂಬಿ ಹರಿಯುತ್ತಿದ್ದ ಕರಿಮಸೂತಿ ಕಾಲುವೆಗೆ ಬಿದ್ದ 4 ಮಂದಿ ಮಕ್ಕಳು; 2  ಪುಟಾಣಿಗಳ ದಾರುಣ ಅಂತ್ಯ

10/10/2021, 11:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಕಾಲುವೆ ಬಳಿ ಆಟವಾಡುತ್ತಿದ್ದ ಇಬ್ಬರು ಮಕ್ಕಳು ಅಕಸ್ಮಾತ್ ಕಾಲು ಜಾರಿ ಕರಿಮಸೂತಿ ಕಾಲುವೆಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಸಂಜೆ ನಡೆದಿದೆ.

ಗ್ರಾಮದ ಸರಕಾರಿ ಪ್ರೌಢ ಶಾಲೆ ಸಮೀಪ ಹಾದು ಹೋಗಿರುವ ಕರಿಮಸೂತಿ ಕಾಲುವೆಯಲ್ಲಿ ನೀರು ತುಂಬಿ ಹರಿಯುತ್ತಿದ್ದು, ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಮಕ್ಕಳಾದ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8), ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಎಂಬ ನಾಲ್ವರು ಮಕ್ಕಳು ಆಟವಾಡಲು ಕಾಲುವೆ ಹತ್ತಿರ ಹೋಗಿ ಕಾಲುವೆಯಲ್ಲಿ ಬಿದ್ದಿದ್ದರು. ಇವರಲ್ಲಿ ಶ್ರೀಧರ ಶಂಕರ ಪುಂಡಿಪಲ್ಲೆ (3), ವಿಶ್ವನಾಥ ವಿನಾಯಕ ಪುಂಡಿಪಲ್ಲೆ (8) ಇವರನ್ನು ಕಾಲುವೆಯಿಂದ ಬಚಾವ್ ಮಾಡಲಾಗಿದೆ. ವಿಜಯ ವಿನಾಯಕ ಪುಂಡಿಪಲ್ಲೆ (7) ಹಾಗೂ ಸ್ವಪ್ನಾ ವಿನಾಯಕ ಪುಂಡಿಪಲ್ಲೆ (11) ಇಬ್ಬರು ಸಾವನ್ನಪ್ಪಿದ್ದಾರೆ.


ಅಗ್ನಿಶಾಮಕ ದಳ ಸಿಬ್ಬಂದಿಯ ಸಹಾಯದಿಂದ ಎಲ್ಲರನ್ನು ಹೊರ ತಗೆಯುವಷ್ಟರಲ್ಲಿ ಇಬ್ಬರು ನೀರಿನಲ್ಲಿಯೇ ಸಾವನ್ನಪ್ಪಿದ್ದರು. ಈ ಕುರಿತು ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳದಲ್ಲಿ ಮಕ್ಕಳು ಸಾವನ್ನಪಿದ ಘಟನೆಯನ್ನು ನೋಡಿ ಗ್ರಾಮಸ್ಥರ ಹಾಗೂ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು