11:58 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು: ಶಾಸಕರ ಜತೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ್ ದಿಢೀರ್ ಸಭೆ

25/05/2021, 18:46

ಅಥಣಿ(reporterkarnataka news): ಅಥಣಿ ತಾಲೂಕಿನಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದ ಶಾಸಕರು ಮತ್ತು ತಾಲೂಕಿನ 

ಉನ್ನತ ಅಧಿಕಾರಿಗಳ ಜತೆಯಲ್ಲಿ ತುರ್ತು ಪರಿಸ್ಥಿತಿಯ ಕುರಿತು ದಿಢೀರ್ ಸಭೆ ನಡೆಸಿದರು.

ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹಿರೇಮಠ್ ಅವರು, ಈಗಾಗಲೇ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಹತೋಟಿಯಲ್ಲಿದ್ದು ಯಾರು ಭಯಪಡುವ ಅವಶ್ಯಕತೆಯಿಲ್ಲ. ಈಗಾಗಲೇ  ಹೋಬಳಿ ಮಟ್ಟದಲ್ಲಿ ಕೋವಿಡ್ ಸೆಂಟರ್ ತೆರೆಯಲಾಗಿದ್ದು, ಮುಂದೆ ಇದೇ ಕ್ರಮವಾಗಿ ಸಾರ್ವಜನಿಕ ಆಸ್ಪತ್ರೆಗೆ ಕೂಡ ಕೋವಿಡ್ ಸೆಂಟರ್ ಗಳಾಗಿ ಪರಿವರ್ತಿಸಲಾಗುವುದು ಎಂದರು.

ತಾಲೂಕಿನಲ್ಲಿ ಯಾವುದೇ ರೀತಿಯ ವ್ಯಾಕ್ಸಿನ್ ಕೊರತೆ ಇಲ್ಲ. ಆದಷ್ಟು ಬೇಗ ಎಲ್ಲ ವರ್ಗದ ಜನರಿಗೂ ವ್ಯಾಕ್ಸಿನ್ ಕೊಡಿಸಲಾಗುವುದು. ಕೊರೊನಾ ಪಾಸಿಟಿವ್ ಬಂದಂತ ವ್ಯಕ್ತಿಗಳು ಮನೆಯಲ್ಲೇ ಚಿಕಿತ್ಸೆ ಪಡೆಯದೇ ಕೋವಿಡ್ ಸೆಂಟರ್ ಗಳಿಗೆ ಬಂದು ಚಿಕಿತ್ಸೆ ಪಡೆಯುವುದು ಉತ್ತಮ. ಏಕೆಂದರೆ ಮನೆಯಲ್ಲಿ ಎಲ್ಲ ಜನರಿಗೂ ವೈರಸ್ ತಗುಲುವ ಆತಂಕವಿದ್ದು, ಆದಷ್ಟು ಕೋವಿಡ್ ಸೆಂಟರಿಗೆ ಹೋಗಿ ಚಿಕಿತ್ಸೆ ಪಡೆಯಬೇಕು

ಶಾಸಕ ಮಹೇಶ್ ಕುಮ್ಟಳ್ಳಿ, ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮಾರ್. ಮುಂತಾದವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು