10:00 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು