4:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಅಥಣಿ ತಾಲೂಕಿನ ರೈತರ ಮೊಗದಲ್ಲಿ ಹರ್ಷ ತಂದ ಡಿಸಿಎಂ ಲಕ್ಷ್ಮಣ್ ಸವದಿ: ನೀರಾವರಿ ಪಂಪ್ ಸೆಟ್ ಗಳಿಗೆ ಚಾಲನೆ

27/05/2021, 14:54

ರಾಹುಲ್ ಅಥಣಿ ಬೆಳಗಾವಿ
info.reporterkarnataka@ gmail.com

ಅಥಣಿ ತಾಲೂಕಿನ ಹಲ್ಯಾಳ ಯಾತ ನೀರಾವರಿ ಪಂಪ್ ಸೆಟಗಳಿಗೆ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. 

ಪ್ರತಿ ವರ್ಷ ಜೂನ್ ಹಾಗೂ ಜುಲೈ ತಿಂಗಳಲ್ಲಿ ಪ್ರಾರಂಭವಾಗುತ್ತಿದ್ದ ಕೆನಾಲ್ ನೀರನ್ನು ಈ ವರ್ಷ ಮೇ ತಿಂಗಳಲ್ಲಿ ಪ್ರಾರಂಭಿಸಲಾಗಿದೆ.  ಮುಂಗಾರು ಬೆಳೆಯಲು ಅನುಕೂಲವಾಗಲು ಕೆರೆ-ಕಟ್ಟೆ, ಬಾಂದಾರ ಹಾಗೂ ಮುಂತಾದವುಗಳಲ್ಲಿ ನೀರು ತುಂಬಿ ಜನರಿಗೆ ಅನುಕೂಲವಾಗುತ್ತದೆ. ಇದೇ ತೆರನಾಗಿ ಮುಂದಿನ ತಿಂಗಳಲ್ಲಿ ಕರಿಮಸೂತಿ ಯಾತ ನೀರಾವರಿ ಹಾಗೂ ಐನಾಪುರ ನೀರಾವರಿ ಗಳನ್ನು ಪ್ರಾರಂಭಿಸಿ ರೈತರಿಗೆ ಬೆಳೆ ಬೆಳೆಯಲು ಅನುಕೂಲ ಮಾಡಿಕೊಡಲಾಗುವುದು. ಮುಖ್ಯಮಂತ್ರಿ ಬದಲಾವಣೆ ಕುರಿತು ಯಾವುದೇ ರೀತಿಯ ಚರ್ಚೆಗಳು ಆಗಿಲ್ಲ. ಈ ಕೋವಿಡ್ ಸಂದರ್ಭದಲ್ಲಿ ಈ ಕುರಿತು ಜನರ ಆರೋಗ್ಯದ ಕುರಿತು ಕಾಳಜಿ ಮಾಡುವುದು ಮಹತ್ತರವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಬಿ. ಅರ್. ರಾಟೋಡ್, ಕೆ. ಕೆ. ಜಾಲಿಬೇರಿ, ಸಹಾಯಕ ಕಾರ್ಯ ನಿರ್ವಾಹಕರು ಕೆ ರವಿ, ಪ್ರವಿಣ ಹುಣಶೀಕಟ್ಟಿ, ರಾಜೇಂದ್ರ ರೋಡಗಿ. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮುದುಕಣ್ಣ. ಸೇಗುಣಸಿ, ಮಹಾದೇವ ಬಿಸಲನಾಯಕ್, ಚಂದ್ರಕಾಂತ್ ಕಾಗವಾಡ ಹಾಗೂ ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು