3:31 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಅಥಣಿಯ ಹಲ್ಯಾಳ: ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ

01/02/2023, 22:08

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಬಹುದಿನಗಳ ಬೇಡಿಕೆಯಾಗಿದ್ದ ಹಲ್ಯಾಳ ಗ್ರಾಮದಿಂದ ರೆಡ್ಡರಹಟ್ಟಿ ಗ್ರಾಮದವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮಹೇಶ್ ಕುಮಠಳ್ಳಿ ಬುಧವಾರ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಗ್ರಾಮದ ಬಿಜೆಪಿ ಯುವ ಮುಖಂಡರಾದ ಸಂಗಮೇಶ್ ಇಂಗಳಿ ಅವರ ಸತತ ಪ್ರಯತ್ನದಿಂದ ಗ್ರಾಮದಲ್ಲಿ ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಗ್ರಾಮದ ಅಭಿವೃದ್ಧಿಗೆ ಬಹು ಮುಖ್ಯ ಪಾತ್ರ ವಹಿಸಿದ್ದಾರೆ.

ಈ ವೇಳೆ ಮಾತನಾಡಿದ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರೂ ಆಗಿರುವ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಅವರು ಹಲ್ಯಾಳ ಗ್ರಾಮದಲ್ಲಿ ಎಲ್ಲಾ ಪ್ರಮುಖ ಕಾಮಗಾರಿಗಳನ್ನು ಕಾರ್ಯಗತಿಗೆ ತರಲಾಗಿದೆ. ಬಹುದಿನಗಳಿಂದ ಗ್ರಾಮಕ್ಕೆ ಒಂದು ಪದವಿಪೂರ್ವ ಮಹಾವಿದ್ಯಾಲಯದ ಅವಶ್ಯಕತೆ ಇದೆ ಎಂದು ಮಾಹಿತಿ ಇದ್ದು ಈಗಾಗಲೇ 11 ಕಾಲೇಜುಗಳ ಮುಂಜರಾತಿಗೆ ಸರಕಾರಕ್ಕೆ ಮನವಿಯನ್ನ ಸಲ್ಲಿಸಿದ್ದೇನೆ. ಮುಂಬರುವ ದಿನಗಳಲ್ಲಿ ಹಲ್ಯಾಳ ಗ್ರಾಮಕ್ಕೆ ಗ್ರಾಮಕ್ಕೆ ಪದವಿ ಪೂರ್ವ ಕಾಲೇಜು ಮಂಜೂರು ಮಾಡಿಕೊಡಲಾಗುವುದೆಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಮುದಕಣ್ಣ ಸೇಗುಣಿಸಿ, ಊರಿನ ಪ್ರಮುಖರು ಕುಮಾರಗೌಡ ಪಾಟೀಲ, ಸುರೇಶ್ ವಾಡೆದ, ರಾವಸಾಬ ಪಾಟೀಲ, ದೀಪಕ್ ಮುರಗುಂಡಿ, ಸಿದ್ದಪ್ಪ ಲೋಕುರ ರಮೇಶ್ ಗುಮಚಿ, ಅಣ್ಣಪ್ಪ ಬಾಗಿ, ಮಾಂತೇಶ ಇಂಗಳಿ, ಸಂತೋಷ್ ಕಾಂಬಳೆ ರಾಹುಲ್ ಮಾದರ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು