12:15 AM Thursday15 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಸಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ: ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ

22/01/2023, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ತಿಂಗಳಿನ 21ರಿಂದ ಆರಂಭಗೊಂಡ 9 ದಿನಗಳ ಕಾಲದ ವಿಜಯ ಸಂಕಲ್ಪ ಯಾತ್ರೆಗೆ ಅಥಣಿ ತಾಲೂಕಿನ ಶೇಗುಣಸಿಯಲ್ಲಿ ಚಾಲನೆ ನೀಡಲಾಯಿತು.

ಪ್ರತಿ ಮನೆ ಮನೆಗೆ ಕರಪತ್ರ ಕೊಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆ ಹಾಗೂ ಅಭಿವೃದ್ದಿ ಕಾರ್ಯಗಳ ಮಾಹಿತಿ ಕೊಡಲಾಗಿದೆ, ಸ್ಟಿಕರ್ ಪ್ರತಿ ಮನೆ ಮನೆಗೆ ಹಚ್ಚಿ ಬಿಜೆಪಿ ಅಭಿಯಾನ ಉಂಟು ಮಾಡಬೇಕು, ಗೋಡೆ ಬರಹ ಬರೆಯಬೇಕು, ಪ್ರತಿ ಬೂತ್ ಮಟ್ಟದಲ್ಲಿ ಕನಿಷ್ಠ 10 ಗೋಡೆ ಬರಹ ಬರೆಯಬೇಕು, 29 ರಂದು ಪ್ರಧಾನಿಯವರ ಮನ್ ಕಿ ಬಾತ್ ಕಾರ್ಯಕ್ರಮವಿದೆ ಆ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡುವಂತೆ ಪ್ರೇರೆಪಿಸಲಾಗುವುದು ಎಂದು ಬಿಜೆಪಿ ಅಥಣಿ ಮಂಡಳ ವಿಸ್ತಾರಕ ಅರ್ಜುನ ಪವಾರ ಅವರು ಹೇಳಿದ್ದಾರೆ.
ಅವರು ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಅನಂತರ ಶಾಸಕ ಮಹೇಶ ಕುಮಠಳ್ಳಿ ಅವರು ಮಾತನಾಡುತ್ತಾ ಬರುವ 29 ರ ಪ್ರಧಾನಿಯವ ಕಾರ್ಯಕ್ರಮ ವೀಕ್ಷಿಸಿ , ಜೊತೆಗೆ ಬಿಜೆಪಿಯ ಕಾರ್ಯಸಾಧನೆಗಳನ್ನು ಪ್ರತಿಯೋರ್ವ ಜನರಿಗೆ ತಿಳಿಸಿಕೊಡುವ ಕಾರ್ಯ ಎಲ್ಲ ಕಾರ್ಯಕರ್ತರು ನಡೆಸಿಕೊಡಬೇಕು. ಈ ಮೂಲಕ ದೇಶವನ್ನು ಸುಬಧ್ರವಾಗಿ ಕಟ್ಟಿಕೊಡುವುದನ್ನು ಕಾರ್ಯಕರ್ತರು ಮಾಡಬೇಕು, 2023 ರ ಚುನಾವಣೆಯ ಪೂರ್ವಭಾವಿಯಾಗಿ ಹಲವಾರು ಯೋಜಮೆ ಹಾಕಿಕೊಂಡಿದ್ದು ಅವೆಲ್ಲವುಗಳ ಮಾಹಿತಿ ಜನರಿಗೆ ಮುಟ್ಟಿಸುವುದಾಗಿದೆ ಎಂದರು.

ಈ ವೇಳೆ ನಿಂಗಪ್ಪ ನಂದೇಶ್ವರ, ಕಲ್ಮೇಶ ಯಲಡಗಿ, ಶಿವಪುತ್ರ ನಾಯಿಕ, ರಾಜು‌ ಮರಡಿ, ಬಸವರಾಜ ಮಗದುಮ್, ವಿವೇಕ ನಾರಗೊಂಡ, ಕುಮಾರ ಸತ್ತಿಗೌಡರ, ಲಕ್ಷ್ಮಣ ಆಲೂರ, ಅಶೋಕ ಅಮ್ಮಣಗಿ, ವೆಂಕಟೇಶ ದೇಶಪಾಂಡೆ ಸೇರಿದಂತೆ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು