2:10 AM Wednesday1 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

ಅಥಣಿಯ ಶೇಗುಣಸಿಯಲ್ಲಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ: ಪ್ರಧಾನಿ ಸ್ವಾಗತಕ್ಕೆ ಸಿದ್ಧತೆ

22/01/2023, 14:02

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಈ ತಿಂಗಳಿನ 21ರಿಂದ ಆರಂಭಗೊಂಡ 9 ದಿನಗಳ ಕಾಲದ ವಿಜಯ ಸಂಕಲ್ಪ ಯಾತ್ರೆಗೆ ಅಥಣಿ ತಾಲೂಕಿನ ಶೇಗುಣಸಿಯಲ್ಲಿ ಚಾಲನೆ ನೀಡಲಾಯಿತು.

ಪ್ರತಿ ಮನೆ ಮನೆಗೆ ಕರಪತ್ರ ಕೊಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆ ಹಾಗೂ ಅಭಿವೃದ್ದಿ ಕಾರ್ಯಗಳ ಮಾಹಿತಿ ಕೊಡಲಾಗಿದೆ, ಸ್ಟಿಕರ್ ಪ್ರತಿ ಮನೆ ಮನೆಗೆ ಹಚ್ಚಿ ಬಿಜೆಪಿ ಅಭಿಯಾನ ಉಂಟು ಮಾಡಬೇಕು, ಗೋಡೆ ಬರಹ ಬರೆಯಬೇಕು, ಪ್ರತಿ ಬೂತ್ ಮಟ್ಟದಲ್ಲಿ ಕನಿಷ್ಠ 10 ಗೋಡೆ ಬರಹ ಬರೆಯಬೇಕು, 29 ರಂದು ಪ್ರಧಾನಿಯವರ ಮನ್ ಕಿ ಬಾತ್ ಕಾರ್ಯಕ್ರಮವಿದೆ ಆ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡುವಂತೆ ಪ್ರೇರೆಪಿಸಲಾಗುವುದು ಎಂದು ಬಿಜೆಪಿ ಅಥಣಿ ಮಂಡಳ ವಿಸ್ತಾರಕ ಅರ್ಜುನ ಪವಾರ ಅವರು ಹೇಳಿದ್ದಾರೆ.
ಅವರು ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

ಅನಂತರ ಶಾಸಕ ಮಹೇಶ ಕುಮಠಳ್ಳಿ ಅವರು ಮಾತನಾಡುತ್ತಾ ಬರುವ 29 ರ ಪ್ರಧಾನಿಯವ ಕಾರ್ಯಕ್ರಮ ವೀಕ್ಷಿಸಿ , ಜೊತೆಗೆ ಬಿಜೆಪಿಯ ಕಾರ್ಯಸಾಧನೆಗಳನ್ನು ಪ್ರತಿಯೋರ್ವ ಜನರಿಗೆ ತಿಳಿಸಿಕೊಡುವ ಕಾರ್ಯ ಎಲ್ಲ ಕಾರ್ಯಕರ್ತರು ನಡೆಸಿಕೊಡಬೇಕು. ಈ ಮೂಲಕ ದೇಶವನ್ನು ಸುಬಧ್ರವಾಗಿ ಕಟ್ಟಿಕೊಡುವುದನ್ನು ಕಾರ್ಯಕರ್ತರು ಮಾಡಬೇಕು, 2023 ರ ಚುನಾವಣೆಯ ಪೂರ್ವಭಾವಿಯಾಗಿ ಹಲವಾರು ಯೋಜಮೆ ಹಾಕಿಕೊಂಡಿದ್ದು ಅವೆಲ್ಲವುಗಳ ಮಾಹಿತಿ ಜನರಿಗೆ ಮುಟ್ಟಿಸುವುದಾಗಿದೆ ಎಂದರು.

ಈ ವೇಳೆ ನಿಂಗಪ್ಪ ನಂದೇಶ್ವರ, ಕಲ್ಮೇಶ ಯಲಡಗಿ, ಶಿವಪುತ್ರ ನಾಯಿಕ, ರಾಜು‌ ಮರಡಿ, ಬಸವರಾಜ ಮಗದುಮ್, ವಿವೇಕ ನಾರಗೊಂಡ, ಕುಮಾರ ಸತ್ತಿಗೌಡರ, ಲಕ್ಷ್ಮಣ ಆಲೂರ, ಅಶೋಕ ಅಮ್ಮಣಗಿ, ವೆಂಕಟೇಶ ದೇಶಪಾಂಡೆ ಸೇರಿದಂತೆ ಇತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು