8:29 AM Friday16 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ಕಾಂಗ್ರೆಸ್ ಬೃಹತ್ ಶಕ್ತಿ ಪ್ರದರ್ಶನ: ಲಕ್ಷ್ಮಣ ಸವದಿ ನಾಮಪತ್ರಕ್ಕೆ ಜನಸಾಗರ; ಟ್ರಾಫಿಕ್ ಜಾಮ್

18/04/2023, 17:17

ರಾಹುಲ್ ಅಥಣಿ ಬೆಳಗಾವಿ

info.reporterlarmataka@gmai.com

ಅಥಣಿ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಮಂಗಳವಾರ ಭಾರೀ ಜನಸ್ತೋಮ ದೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಅಥಣಿ ತಹಸೀಲ್ದಾರ್ ಕಚೇರಿಗೆ ತೆರಳಿ ಸವದಿ ನಾಮಪತ್ರ ಸಲ್ಲಿಕೆ ಮಾಡಿದರು. ಲಕ್ಷ್ಮಣ್ ಸವದಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ನಿರೀಕ್ಷೆಗೂ ಮೀರಿ ಜನಸಾಗರ ಹರಿದು ಬಂದಿತ್ತು. ರಸ್ತೆ ಉದ್ದಕ್ಕೂ ಜನ ಜಮಾವಣೆಗೊಂಡು ಅಥಣಿಯಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು.
ಸವದಿ ಅವರ ನಿವಾಸದಿಂದ ತಹಸೀಲ್ದಾರ್ ಕಚೇರಿವರೆಗೂ ಸಾಗರರೂಪದಲ್ಲಿ ಜನರು ಹರಿದು ಬಂದರು. ಪಾದಯಾತ್ರೆ ಮೂಲಕ ನಾಮಪತ್ರ ಸಲ್ಲಿಕೆ ಸ್ಥಳಕ್ಕೆ ಬರಲಾಯಿತು.


ಬೆಳಗಾವಿ ಜಿಲ್ಲೆಯಲ್ಲೇ ಸವದಿ ಅವರ ನಾಮಪತ್ರ ಸಲ್ಲಿಕೆಗೆ ಜನರು ಸೇರಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
ನಾಮಪತ್ರ ಸಲ್ಲಿಕೆ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸವದಿ ಅವರು, ಆರೆಸ್ಸೆಸ್ ನವರು ಗುಪ್ತವಾಗಿ ನನಗೆ ಮಾತದಾನ ಮಾಡ್ತಾರೆ. ಬಹಳ ಅಂತರದಿಂದ ಗೆಲ್ಲುತ್ತೇನೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು