1:25 AM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ

25/10/2023, 16:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ
ಸವದಿ ಅವರು ಪಾಲ್ಗೊಂಡು ಪೂಜೆ, ಪ್ರಾರ್ಥನೆ ನೆರವೇರಿಸಿದರು.
ನಾಡಿನ ಸಮಸ್ತ ಜನತೆಗೆ ದಸರಾ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು. ಈ ಶುಭ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ, ದುರ್ಗಾಮಾತೆ ಸರ್ವರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಪುರಸಭೆ ಸದಸ್ಯರಾದ ರಾಜು ಬುಲಬುಲೆ, ಸಂತೋಷ ಸಾವಡಕರ, ಮುಖಂಡರಾದ ದಿಲೀಪ ಲೋನಾರಿ, ರಾಮನಗೌಡ ಪಾಟೀಲ, ನಿತೀನ ಗೋಂಗಡೆ, ವಿಜಯಸಿಂಗ್ ರಜಪೂತ* ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ನಾವು ನೀವು ಬಂಗಾರದ್ಹಾಂಗಿರೋಣ್ರೀ: ದಸರಾ, ವಿಜಯದಶಮಿ, ಸಂಬಂಧ ಬೆಸೆಯುವ ಬನ್ನಿ ಹಬ್ಬದ ನಿಮಿತ್ಯ ಶಾಸಕ ಲಕ್ಷ್ಮಣ
ಸವದಿ ಅವರನ್ನು ಅಥಣಿ
ಕ್ಷೇತ್ರದ ವಿವಿಧ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭೇಟಿ ಮಾಡಿ ಪರಸ್ಪರ ಬನ್ನಿ ಕೊಟ್ಟು “ನಾವು ನೀವು ಬಂಗಾರದ್ಹಾಂಗಿರೋಣ್ರೀ”..ಎಂದು ಹಬ್ಬದ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು