3:03 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಅಥಣಿಯಲ್ಲಿ ನವರಾತ್ರಿ ದುರ್ಗಾಮಾತಾ ಪೂಜೆ: ಶಾಸಕ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಸಂಬಂಧ ಬೆಸೆಯುವ ಬನ್ನಿ ಹಬ್ಬ ಆಚರಣೆ

25/10/2023, 16:51

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ನವರಾತ್ರಿ ದಸರಾ ಹಬ್ಬದ ಅಂಗವಾಗಿ ಅಥಣಿ ಪಟ್ಟಣದ ಶ್ರೀ ಹನುಮಾನ ಮಂದಿರದ ಸಮೀಪದಲ್ಲಿ ಶ್ರೀ ದುರ್ಗಾಮಾತಾ ಪೂಜೆ ಸಮಾರಂಭ ನಡೆಯಿತು.

ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ
ಸವದಿ ಅವರು ಪಾಲ್ಗೊಂಡು ಪೂಜೆ, ಪ್ರಾರ್ಥನೆ ನೆರವೇರಿಸಿದರು.
ನಾಡಿನ ಸಮಸ್ತ ಜನತೆಗೆ ದಸರಾ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು. ಈ ಶುಭ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ, ದುರ್ಗಾಮಾತೆ ಸರ್ವರ ಬಾಳಲ್ಲಿ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸಿದರು.
ಪುರಸಭೆ ಸದಸ್ಯರಾದ ರಾಜು ಬುಲಬುಲೆ, ಸಂತೋಷ ಸಾವಡಕರ, ಮುಖಂಡರಾದ ದಿಲೀಪ ಲೋನಾರಿ, ರಾಮನಗೌಡ ಪಾಟೀಲ, ನಿತೀನ ಗೋಂಗಡೆ, ವಿಜಯಸಿಂಗ್ ರಜಪೂತ* ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.
ನಾವು ನೀವು ಬಂಗಾರದ್ಹಾಂಗಿರೋಣ್ರೀ: ದಸರಾ, ವಿಜಯದಶಮಿ, ಸಂಬಂಧ ಬೆಸೆಯುವ ಬನ್ನಿ ಹಬ್ಬದ ನಿಮಿತ್ಯ ಶಾಸಕ ಲಕ್ಷ್ಮಣ
ಸವದಿ ಅವರನ್ನು ಅಥಣಿ
ಕ್ಷೇತ್ರದ ವಿವಿಧ ಮುಖಂಡರು, ಅಭಿಮಾನಿಗಳು, ಕಾರ್ಯಕರ್ತರು, ಸಾರ್ವಜನಿಕರು ಭೇಟಿ ಮಾಡಿ ಪರಸ್ಪರ ಬನ್ನಿ ಕೊಟ್ಟು “ನಾವು ನೀವು ಬಂಗಾರದ್ಹಾಂಗಿರೋಣ್ರೀ”..ಎಂದು ಹಬ್ಬದ ಶುಭಾಶಯ ಕೋರಿದರು.

ಇತ್ತೀಚಿನ ಸುದ್ದಿ

ಜಾಹೀರಾತು