12:21 PM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ ರೈತರು, ಮಹಿಳೆಯರು!

01/10/2022, 14:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು ಸಂಕಷ್ಟ‌ ಪಡುವಂತಾಗಿದೆ.


ತೆಲಸಂಗ ಗ್ರಾಮದಲ್ಲಿ ದೋಣಿ ಹಳ್ಳಕ್ಕೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು ತೋಟದ ಕೆಲಸಕ್ಕೆ ಹೋದ ರೈತರು ಹಗ್ಗ ಹಿಡಿದು ಬರುವಂತಾಗಿದೆ.

ಶಾಸಕರ ಹುಟ್ಟೂರಾದ ತೆಲಸಂಗ ಗ್ರಾಮದಲ್ಲಿ ಕಳೆದ ವರ್ಷ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವಂತಾಗಿದ್ದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ವತಿಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ನಿನ್ನೆ ಸುರಿದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದು ಮತ್ತೆ ಸ್ಥಳೀಯ ರೈತರು ಸಂಕಷ್ಟ ಪಡುವಂತಾಗಿದ್ದು ಶಾಶ್ವತ ಸೇತುವೆ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಆಗ್ರಹಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು