9:54 AM Saturday2 - May 2026
ಬ್ರೇಕಿಂಗ್ ನ್ಯೂಸ್
ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ…

ಇತ್ತೀಚಿನ ಸುದ್ದಿ

ಅಥಣಿ: ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ; ಹಗ್ಗ ಹಿಡಿದು ಹಳ್ಳ ದಾಟಿದ ರೈತರು, ಮಹಿಳೆಯರು!

01/10/2022, 14:57

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದ ತೋಟದ ವಸ್ತಿ ಜನಕ್ಕೆ ಸಂಪರ್ಕ ಕಲ್ಪಿಸುವ ದೋಣಿಹಳ್ಳದ ತಾತ್ಕಾಲಿಕ‌ ಸೇತುವೆ ಕೊಚ್ಚಿಹೋಗಿ ಗ್ರಾಮಸ್ಥರು ಸಂಕಷ್ಟ‌ ಪಡುವಂತಾಗಿದೆ.


ತೆಲಸಂಗ ಗ್ರಾಮದಲ್ಲಿ ದೋಣಿ ಹಳ್ಳಕ್ಕೆ ನಿರ್ಮಿಸಿದ ತಾತ್ಕಾಲಿಕ ಸೇತುವೆ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದು ತೋಟದ ಕೆಲಸಕ್ಕೆ ಹೋದ ರೈತರು ಹಗ್ಗ ಹಿಡಿದು ಬರುವಂತಾಗಿದೆ.

ಶಾಸಕರ ಹುಟ್ಟೂರಾದ ತೆಲಸಂಗ ಗ್ರಾಮದಲ್ಲಿ ಕಳೆದ ವರ್ಷ ಗ್ರಾಮಸ್ಥರು ಹಾಗೂ ಶಾಲೆ ಮಕ್ಕಳು ಹಗ್ಗ ಹಿಡಿದು ಹಳ್ಳ ದಾಟುವಂತಾಗಿದ್ದು ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ಗ್ರಾಮ ಪಂಚಾಯತಿ ವತಿಯಿಂದ ತಾತ್ಕಾಲಿಕ ಸೇತುವೆ ನಿರ್ಮಾಣ ಮಾಡಿ ಕೈ ತೊಳೆದುಕೊಂಡಿದ್ದರು. ಆದರೆ ಇದೀಗ ನಿನ್ನೆ ಸುರಿದ ಭಾರಿ ಮಳೆಗೆ ತಾತ್ಕಾಲಿಕ ಸೇತುವೆ ಕೊಚ್ಚಿ ಹೋಗಿದ್ದು ಮತ್ತೆ ಸ್ಥಳೀಯ ರೈತರು ಸಂಕಷ್ಟ ಪಡುವಂತಾಗಿದ್ದು ಶಾಶ್ವತ ಸೇತುವೆ ನಿರ್ಮಾಣ ಮಾಡಬೇಕೆಂದು ಶಾಸಕರಿಗೆ ಆಗ್ರಹಿಸುತ್ತಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು