4:17 PM Tuesday15 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ ಬಹಿಷ್ಕರಿಸಲು ಕರೆ

06/12/2023, 12:34

ಮಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯವ್ಯಾಪಿ ತರಗತಿ ಬಹಿಷ್ಕರಿಸಿ, ಪ್ರತಿಭಟಿಸುತ್ತಿದ್ದು, ಇದನ್ನು ಬೆಂಬಲಿಸಿ ದ.ಕ., ಉಡುಪಿ ಜಿಲ್ಲೆಯ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಡಿ. 6ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ದಕ ಜಿಲ್ಲಾ ಅಧ್ಯಕ್ಷ ಧೀರಜ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.
ಸರ್ಕಾರದ ಸಿಬ್ಬಂದಿ ಸೇವಾ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಕ್ರಮಾತಿಗೊಳಿಸುವುದು, ಸಹಜ ನೌಕರನಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡುವುದು. ಹಾಗೂ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಅತಿಥಿ ಉಪನ್ಯಾಸಕರಿಗೆ ಕಡಿಮೆ ಅವಧಿಯಲ್ಲಿ ನಿರ್ವಹಿಸಿರುವ ಹೆಚ್ಚುವರಿ ಕಾರ್ಯಭಾರಕ್ಕೆ ಹೆಚ್ಚುವರಿ ವೇತನವನ್ನು ನೀಡಬೇಕು ಎಂಬ ಬೇಡಿಕೆಯೊಂದಿಗೆ ಪ್ರತಿಭಟನೆಯನ್ನು ನಡೆಸಲಾಗುವುದು.
ಈ ಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸಿ ಅತಿಥಿ ಉಪನ್ಯಾಸಕರ ಮಾನವೀಯ ಬೇಡಿಕೆಗಳನ್ನು ಪರಿಗಣಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ. ಸರಕಾರ ಡಿ.7ರ ಒಳಗೆ ಸೂಕ್ತ ಸ್ಪಂದನೆಯನ್ನು ನೀಡದೇ ಇದ್ದಲ್ಲಿ ತರಗತಿ ಬಹಿಷ್ಕಾರದೊಂದಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು