4:20 AM Saturday28 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಅತಿಥಿ ಉಪನ್ಯಾಸಕರ ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಇಂದಿನಿಂದ ತರಗತಿ ಬಹಿಷ್ಕರಿಸಲು ಕರೆ

06/12/2023, 12:34

ಮಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯವ್ಯಾಪಿ ತರಗತಿ ಬಹಿಷ್ಕರಿಸಿ, ಪ್ರತಿಭಟಿಸುತ್ತಿದ್ದು, ಇದನ್ನು ಬೆಂಬಲಿಸಿ ದ.ಕ., ಉಡುಪಿ ಜಿಲ್ಲೆಯ ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ ಡಿ. 6ರಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಲು ರಾಜ್ಯ ಕಾರ್ಯದರ್ಶಿ ಪ್ರಭಾಕರ ಆಚಾರ್ಯ, ದಕ ಜಿಲ್ಲಾ ಅಧ್ಯಕ್ಷ ಧೀರಜ್ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ್ ಪ್ರಕಟಣೆಯಲ್ಲಿ ಕರೆ ನೀಡಿದ್ದಾರೆ.
ಸರ್ಕಾರದ ಸಿಬ್ಬಂದಿ ಸೇವಾ ನಿಯಮಾವಳಿಯಂತೆ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಕ್ರಮಾತಿಗೊಳಿಸುವುದು, ಸಹಜ ನೌಕರನಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ನೀಡುವುದು. ಹಾಗೂ ಮಂಗಳೂರು ವಿವಿ ವ್ಯಾಪ್ತಿಯ ಎಲ್ಲ ಅತಿಥಿ ಉಪನ್ಯಾಸಕರಿಗೆ ಕಡಿಮೆ ಅವಧಿಯಲ್ಲಿ ನಿರ್ವಹಿಸಿರುವ ಹೆಚ್ಚುವರಿ ಕಾರ್ಯಭಾರಕ್ಕೆ ಹೆಚ್ಚುವರಿ ವೇತನವನ್ನು ನೀಡಬೇಕು ಎಂಬ ಬೇಡಿಕೆಯೊಂದಿಗೆ ಪ್ರತಿಭಟನೆಯನ್ನು ನಡೆಸಲಾಗುವುದು.
ಈ ಶಾಂತಿಯುತ ಪ್ರತಿಭಟನೆಗೆ ಸರಕಾರ ಸ್ಪಂದಿಸಿ ಅತಿಥಿ ಉಪನ್ಯಾಸಕರ ಮಾನವೀಯ ಬೇಡಿಕೆಗಳನ್ನು ಪರಿಗಣಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಬೇಕಾಗುತ್ತದೆ. ಸರಕಾರ ಡಿ.7ರ ಒಳಗೆ ಸೂಕ್ತ ಸ್ಪಂದನೆಯನ್ನು ನೀಡದೇ ಇದ್ದಲ್ಲಿ ತರಗತಿ ಬಹಿಷ್ಕಾರದೊಂದಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು