11:08 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ಆತ್ಮ ನಿರ್ಭರ ಯೋಜನೆಯಡಿ ಕೃಷಿಕ ಪ್ರಶಸ್ತಿ: ತಾಲೂಕು, ಜಿಲ್ಲಾಮಟ್ಟದ ಸಾಧಕರು ಕೂಡ ಆರ್ಹರು; ವಿವರ ಕಳುಹಿಸಿ

30/09/2021, 08:27

ಮಂಗಳೂರು (reporterkarnataka.com.):- 2021-22ನೇ ಸಾಲಿನಲ್ಲಿ ಕೃಷಿ ಇಲಾಖೆಯ ಆತ್ಮ ನಿರ್ಭರ ಯೋಜನೆಯಡಿ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಿದೆ.
ಒಬ್ಬ ಅರ್ಜಿದಾರರು ನಿರ್ವಹಿಸುವ ಒಂದು ಚಟುವಟಿಕೆಯಡಿ ಒಂದೇ ಅರ್ಜಿ ಮಾತ್ರ ಸಲ್ಲಿಸಬೇಕು. 

ಚಟುವಟಿಕೆಗಳ ವಿವರ ಇಂತಿದೆ:

ಕೃಷಿಯಲ್ಲಿ ಸಮಗ್ರ ಕೃಷಿ ಪದ್ಧತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ರೇಷ್ಮೆ ಬೇಸಾಯ, ಹೈಟೆಕ್ ತಂತ್ರಜ್ಞಾನ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಇತ್ಯಾದಿ ಸಾಕಾಣಿಕೆ.

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿ, ಫೋಟೋಗ್ರಾಫರ್, ಸಿ.ಡಿ, ಖರ್ಚು ವೆಚ್ಚ, ಪತ್ರಿಕಾ ಪ್ರಕಟಣೆಗಳ ಮಾಹಿತಿಗಳ ದಾಖಲೆಗಳನ್ನು ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಅಕ್ಟೋಬರ್ 16 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕಿನ ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಮಂಗಳೂರು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು