10:40 AM Tuesday16 - December 2025
ಬ್ರೇಕಿಂಗ್ ನ್ಯೂಸ್
Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ…

ಇತ್ತೀಚಿನ ಸುದ್ದಿ

ಆತ್ಮನಿರ್ಭರತೆ: ಭಾರತದಲ್ಲಿ ವರ್ಷಕ್ಕೆ 5 ಮಿಲಿಯನ್‌ ಎಲೆಕ್ಟ್ರಿಕ್‌ ಬೈಕ್ ಉತ್ಪಾದನೆ ಮಾಡಲಿದೆ ಹೀರೋ ಎಲೆಕ್ಟ್ರಿಕ್‌ !

14/03/2022, 11:52

ಹೊಸದಿಲ್ಲಿ(reporterkarnataka.com): ದೇಶದಲ್ಲಿ ವಿದ್ಯತ್‌ ಚಾಲಿತ ವಾಹನಗಳಿಗೆ ಬೇಡಿಕೆ ಹೆಚ್ಚಾದ ಹಾಗೆ ವಾಹನಾ ತಯಾರಿಕಾ ಸಂಸ್ಥೆಗಳು ಕೂಡ ಉತ್ಪಾದನೆಯನ್ನು ಹೆಚ್ಚಿಸುತ್ತಿದೆ.

ಕೇಂದ್ರ ಸರ್ಕಾರ ಕೂಡ ದೇಶದಲ್ಲಿ ಆತ್ಮನಿರ್ಭರತೆ ಹೆಚ್ಚಿಸಲು ಮೇಡ್‌ ಇನ್‌ ಇಂಡಿಯಾ ಯೋಜನೆಯನ್ನು ಜಾರಿಗೆ ತಂದಿದೆ. ಈ ಎರಡೂ ಯೋಜನೆಗಳಿಗೆ ಸಾಥ್‌ ನೀಡುವಂತೆ ಇದೆ ಹೀರೋ ಎಲೆಕ್ಟ್ರಿಕ್‌ ನ ಕಾರ್ಯವೈಕರಿ. ಇದೀಗ ಹೀರೋ ಎಲೆಕ್ಟ್ರಿಕ್‌ ಭಾರತದಲ್ಲಿ ವಾರ್ಷಿಕವಾಗಿ 5 ಮಿಲಿಯನ್‌ ಎಲೆಕ್ಟ್ರಿಕ್‌ ಬೈಕ್‌ ಗಳನ್ನು ಉತ್ಪಾದಿಸುವ ಸಾಮರ್ಥ್ಯ ಹೆಚ್ಚಿಸಲು ತೀರ್ಮಾನಿಸಿದೆ.

ಈ ಯೋಜನೆಯನ್ನು ಕಾರ್ಯ ರೂಪಕ್ಕೆ ತರಲು ಸಂಸ್ಥೆಗೆ ಬರೋಬ್ಬರಿ 1,500 ಕೋಟಿ ರೂ. 2,000 ಕೋಟಿ ರೂ. ವೆಚ್ಚವಾಗಲಿದೆ ಎಂದು ಸಂಸ್ಥೆ ತಿಳಿಸಿದೆ.

ದೇಶದ ಪಶ್ಚಿಮ ಹಾಗೂ ದಕ್ಷಿಣ ಭಾಗಗಳಲ್ಲಿ ಎರಡು ಗ್ರೀನ್‌ ಫೀಲ್ಡ್‌ ಕಾರ್ಖಾನೆಗಳನ್ನು ಸ್ಥಾಪಿಸಲಿದೆ. 2025 ರ ವೇಳೆಗೆ ಭಾರತದಲ್ಲಿ ದ್ವಿಚಕ್ರ ವಾಹನ ಮಾರುಕಟ್ಟೆಯ ಶೇ.30ರಷ್ಟು ಕೇವಲ ವಿದ್ಯುತ್‌ ಚಾಲಿತ ವಾಹನಗಳಿಂದ ಕೂಡಿರುತ್ತದೆ ಎಂದು ಹೀರೋ ಎಲೆಕ್ಟ್ರಿಕ್‌ ನ ಎಂಡಿ ನವೀನ್‌ ಮುಂಜಾಲ್‌ ತಿಳಿಸಿದ್ದಾರೆ.

ಮುಂದಿನ ಹಲವು ವರ್ಷಗಳಲ್ಲಿ ಮಾರುಕಟ್ಟೆಯಲ್ಲಿ ಕನಿಷ್ಠ ಮೂರನೇ ಒಂದು ಭಾಗದಷ್ಟು ಮಾರುಕಟ್ಟೆಯನ್ನು ಹಿಡಿದಿಟ್ಟುಕೊಳ್ಳುವ ವಿಶ್ವಾಸವಿದೆ ಎಂದು ಮುಂಜಾಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು