1:02 PM Wednesday4 - February 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ… ಮೊದಲಿನಂತೆ ಸ್ವತಂತ್ರವಾಗಿ ಸಿನಿಮಾ ಮಾಡಲಾಗುತ್ತಿಲ್ಲ: ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಟ-ನಿರ್ದೇಶಕ ಅನುರಾಗ್ ಕಶ್ಯಪ್

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು