3:23 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು