11:10 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು