8:45 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು