9:07 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು