1:24 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು