1:01 PM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮ

10/06/2024, 23:01

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ವತಿಯಿಂದ ವಿಶ್ವ ಪರಿಸರ ದಿನದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ನಗರದ ಪಡೀಲ್ ನಲ್ಲಿರುವ ಸಂಘದ ಪ್ರಧಾನ ಕಚೇರಿ “ಆತ್ಮಶಕ್ತಿ ಸೌಧ”ದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮವನ್ನು “ಪರಿಸರ ಸೇವಾ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಗೂ ತಾರಸಿ ಕೃಷಿಕರಾದ ಕೃಷ್ಣಪ್ಪ ಗೌಡ ಪಡ್ಡಂಬೈಲ್ ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಮನೆಯಲ್ಲಿ ಒಂದು ಗಿಡವನ್ನು ಬೆಳೆಸಬೇಕು. ಗಿಡ ನೆಡುವುದರ ಜೊತೆಗೆ ನೆಟ್ಟ ಗಿಡಗಳನ್ನು ಚೆನ್ನಾಗಿ ಪೋಷಿಸಿ ಪರಿಸರ ಸಂರಕ್ಷಣೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಮನೆಯ ಸುತ್ತಮುತ್ತ ಗಿಡ ನೆಡಲು ಸ್ಥಳಾವಕಾಶ ಇಲ್ಲದ ಸಂದರ್ಭದಲ್ಲಿ ಎಲ್ಲಾ ರೀತಿಯ ಗಿಡಗಳನ್ನು ತನ್ನ ಮನೆಯ ತಾರಸಿಯಲ್ಲಿ ಬೆಳೆಸಿ ಕೃಷ್ಣಪ್ಪ ಗೌಡ ಪಡ್ಡಂಬೈಲ್‌ರವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು.
ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆಸುವುದರಿಂದ ವಾತಾವರಣದಲ್ಲಿ ಶುದ್ದ ಗಾಳಿಯು ದೊರೆಯುತ್ತದೆ. ಶ್ರೀಯುತರು ಕಳೆದ 25 ವರ್ಷಗಳಿಂದ ತನ್ನ ಮನೆಯ ತಾರಸಿಯಲ್ಲಿ ಗಿಡಗಳನ್ನು ಬೆಳೆದು ಪರಿಸರ ಸಂರಕ್ಷಣೆಗೆ ಮಹತ್ತರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು. ಸಂಘದ ವತಿಯಿಂದ ಪಡೀಲ್ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್ ಹಾಗೂ ಸುತ್ತಮುತ್ತ ಪರಿಸರದಲ್ಲಿ ಗಿಡಗಳನ್ನು ನೆಡಲಾಗಿದೆ ಎಂದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾದ ನೇಮಿರಾಜ್ ಪಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ
ಸೌಮ್ಯ ವಿಜಯ್, ಸಲಹೆಗಾರರಾದ ಅಶೋಕ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು