12:38 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಸಿಎ ಪದವಿ ಪಡೆದ ಮಂಗಳೂರಿನ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು

20/07/2022, 21:36

ಮಂಗಳೂರು(reporterkarnataka.com):ಮೇ 2022ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಧನಂಜಯ್ ಶೇಟ್ ಹಾಗೂ ಗೌರವ ಭಟ್ ಅವರಿಗೆ   ಜುಲೈ  19, 2022 ರಂದು ಗೌರವಿಸಲಾಯಿತು.

“ನಾವು ಕೈಗೆತ್ತಿಕೊಂಡ ಕೆಲಸದಲ್ಲಿ ತೃಪ್ತಿ ಇರಬೇಕು, ಆತ್ಮವಿಶ್ವಾಸ , ನೈತಿಕತೆಯೊಂದಿಗೆ ಸಾಧನೆಯ ಹಾದಿಯಲ್ಲಿ ಬೆಂಬಲ ನೀಡಿದವರ ಸ್ಮರಣೆ ಸದಾ ಇದ್ದರೆ ಯಶಸ್ಸು ಖಚಿತ”  ಎಂದು ಕಾಲೇಜಿನ ಸಂಚಾಲಕ  ಸಿಎ ವಾಮನ್ ಕಾಮತ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನುಡಿದರು.

ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲ್ ಕಾಮತ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಉಷಾ ನಾಯಕ್ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ರಿತಿಕಾ ದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸನ್ಮಾನ ಸಮಾರಂಭದಲ್ಲಿ ಕೆನರಾ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ  ಪುರುಷೋತ್ತಮ ಶೆಣ್ಯೆ, ಟಿ. ಗೋಪಾಲಕೃಷ್ಣ ಶೆಣ್ಯೆ, ಸುರೇಶ್ ಕಾಮತ್, ಡಾ. ಪ್ರೇಮಲತಾ ವಿ, ಪ್ರಾಂಶುಪಾಲರು ಕೆನರಾ ಕಾಲೇಜು ಹಾಗೂ ಸಾಧನೆಗೈದ ವಿದ್ಯಾರ್ಥಿಗಳ ಹೆತ್ತವರೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು