3:11 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ 100 ಶಾಖೆಗಳನ್ನು ತೆರೆಯಲಿ: ಶಾಸಕ ಉಮಾನಾಥ ಕೋಟ್ಯಾನ್ ಹಾರೈಕೆ

12/05/2024, 23:04

ಮೂಡುಬಿದರೆ(reporterkarnataka.com): ಆತ್ಮಶಕ್ತಿ ವಿವಿಧೊದ್ದೇಶ ಸಹಕಾರಿ ಸಂಘ 32ನೇ ಶಾಖೆ ಪಕ್ಷಿಕೆರೆಯಲ್ಲಿ ಉದ್ಘಾಟನೆ ಸಹಕಾರಿ ಸಂಘದ ಬ್ಯಾಂಕ್‌ಗಳು ಗ್ರಾಮೀಣ ಜನರ ನಾಡಿ ಮಿಡಿತದಂತಿವೆ. ಇಂದು ಸಹಕಾರಿ ಸಂಘಗಳು ಜನರ ಸಹಕಾರದಿಂದ ಬೆಳೆಯುತ್ತಿವೆ. ಈ ಸಂಸ್ಥೆ 100 ಶಾಖೆಗಳನ್ನು ಆರಂಭಿಸಲಿ ಎಂದು ಮೂಲ್ಕಿ ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಅವರು ಶುಕ್ರವಾರ ಪಕ್ಷಿಕೆರೆಯ ಮುಖ್ಯ ರಸ್ತೆಯ ಲಘುವಿ ಕಾಂಪ್ಲೆಕ್ಸ್ ನಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 32ನೇ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದರು.
ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರದ ಧರ್ಮಗುರು ವಂ| ಮೆಲ್ವಿನ್ ನೋರೋನ್ನಾ ದೀಪ ಬೆಳಗಿಸಿ ಮಾತನಾಡಿ, ಅಭಿವೃದ್ದಿಯ ದೃಷ್ಟಿಯಿಂದ ಬ್ಯಾಂಕ್‌ಗಳು ಹಾಗೂ ವಾಣಿಜ್ಯ ಸಂರ್ಕೀಣಗಳು ಹುಟ್ಟಿಬರಬೇಕು. ಆಗ ಜನರಿಗೆ ಸೌಕರ್ಯ ಸೌಲಭ್ಯಗಳು ದೊರೆಯುತ್ತವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ಮಾತನಾಡಿ 2012ರಲ್ಲಿ ಆರಂಭಗೊಂಡ ಸಂಸ್ಥೆ ಇಂದು 32ನೇ ಶಾಖೆಯನ್ನು ತೆರೆಯುವ ತನಕ ಬೆಳೆದಿದೆ. 2 ಸಾವಿರ ಕೋ.ರೂ. ವಾರ್ಷಿಕ ವಹಿವಾಟು ಇದ್ದು, 3.3 ಕೋಟಿ ರೂ ಲಾಭ ಪಡೆದಿದೆ. ಮುಂದಿನ ದಿನಗಳಲ್ಲಿ ಹಲವಾರು ಯೋಜನೆಯನ್ನು ಅನುಷ್ಠಾನ ಮಾಡಲಿದ್ದೇವೆ ಎಂದರು .
ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ ಭದ್ರತಾಕೋಶವನ್ನು ಉದ್ಘಾಟಿಸಿದರು. ಕೆಮ್ರಾಲ್ ಗ್ರಾ.ಪಂ. ಅಧ್ಯಕ್ಷ ಮಯ್ಯದ್ದಿ ಗಣಕೀಕೃತ ಬ್ಯಾಂಕಿಂಗ್ ಸೇವೆಗೆ ಚಾಲನೆ ನೀಡಿದರು. ಎಸ್. ಕೋಡಿ ನಾರಾಯಣ ಗುರು ಸಂಘದ ಅಧ್ಯಕ್ಷ ನವೀನ್ ಹರಿಪಾದೆ ನಿರಖು ಠೇವಣಿ ಪತ್ರ ವಿತರಿಸಿದರು.
ಸಮಾಜ ಸೇವಕ ಧನಂಜಯ ಶೆಟ್ಟಿಗಾರ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು. ಹಳೆಯಂಗಡಿ ಪ್ರಿಯದರ್ಶಿನಿ ಸಹಕಾರಿ ಸಂಘದ ಅಧ್ಯಕ್ಷ ವಸಂತ ಬೆರ್ನಾಡ್ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಜಿ.ಪಂ. ಮಾಜಿ ಉಪಾಧ್ಯಕ್ಷ ಕಸ್ತೂರಿ ಪಂಜ ಉಳಿತಾಯ ಖಾತೆಗೆ ಚಾಲನೆ ನೀಡಿದರು.


ಕಟ್ಟಡದ ಮಾಲಕ ಶ್ರೀನಿವಾಸ ಕೋಟ್ಯಾನ್ , ಆಡಳಿತ ಮಂಡಳಿಯ ಜಿ. ಪರಮೇಶ್ವರ ಪೂಜಾರಿ, ಸೀತಾರಾಮ ಎನ್., ರಮನಾಥ ಸನಿಲ್, ಚಂದ್ರಹಾಸ ಮರೋಳಿ, ಗೋಪಾಲ್ ಎಂ., ಸಲಹೆಗಾರ ಅಶೋಕ್ ಕುಮಾರ್ ಮತ್ತಿತ್ತರರು ಉಪಸ್ಥಿತರಿದ್ದರು.
ಮುಖ್ಯಕಾರ್ಯನೀರ್ವಹಣಾಧಿಕಾರಿ ಸೌಮ್ಯ ವಿಜಯ್ ಸ್ವಾಗತಿಸಿದರು, ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು