4:39 PM Wednesday3 - December 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿಗೆ ಆಗಮಿಸಿದ ಕೆ.ಸಿ. ವೇಣುಗೋಪಾಲ್: ಡಿಕೆ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು Kodagu | ವಿರಾಜಪೇಟೆಯ ಕರಡಿಗೋಡುನಲ್ಲಿ ಕಾಡಾನೆಗಳ ಉಪಟಳ: ಬೆಳೆ ನಾಶ ಹುಣಸೂರು: ಜನರಿಗೆ ಹೆದರಿ ತಾಯಿ ಹುಲಿಯಿಂದ ಬೇರ್ಪಟ್ಟ 4 ಮರಿ ಹುಲಿಗಳು ಮತ್ತೆ… Shivamogga | ತೀರ್ಥಹಳ್ಳಿ: ಸ್ಕೂಟಿ – ಕಾರು ನಡುವೆ ಅಪಘಾತ; ಮಹಿಳೆಗೆ ಗಾಯ ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು