12:29 AM Wednesday7 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು