5:50 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ Kodagu | ವಿದೇಶಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ: ಹೋಂ ಸ್ಟೇ ಮಾಲೀಕನಿಗೆ… ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು