2:54 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು