1:38 PM Wednesday2 - September 2026
ಬ್ರೇಕಿಂಗ್ ನ್ಯೂಸ್
ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು