10:25 AM Monday19 - May 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಗುಡುಗು ಸಹಿತ ಭಾರೀ ಮಳೆ: ರಸ್ತೆಯಲ್ಲಿ ನಿಂತ ನೀರು; ಟ್ರಾಫಿಕ್ ಜಾಮ್;… ಪಾಕ್ ಬೆಂಬಲಿತ ಭಯೋತ್ಪಾದನೆ: ಅಮೆರಿಕ ತೆರಳಲಿರುವ ಸರ್ವಪಕ್ಷ ನಿಯೋಗದಲ್ಲಿ ಸಂಸದರಾದ ತೇಜಸ್ವಿ ಸೂರ್ಯ,… Chikkamagaluru | ಕೃಷಿ ಹೊಂಡದಲ್ಲಿ ಒಂಟಿ ಸಲಗನ ಜಲಕ್ರೀಡೆ!: ಒಂದು ತಾಸಿಗೂ ಅಧಿಕ… ಕರ್ನಾಟಕದ ಆನೆ ಮೇ 21ರಂದು ಆಂಧ್ರಕ್ಕೆ: ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್… MSEM | ಮುಂದಿನ ದಿನಗಳಲ್ಲಿ ಎಂಎಸ್ಎಂಇ ಪ್ರತ್ಯೇಕ ಇಲಾಖೆ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ Tamilnadu | ಮಂಜೇಶ್ವರದ ಸ್ನೇಹಾಲಯದಿಂದ ಕುಂಬಕೋಣಂವರೆಗೆ ಗಿರಿ ಪಯಣ: ಕುಟುಂಬ ಜತೆ ಮತ್ತೆ… ಮಲೆನಾಡಿನಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ಕ್ರಮ: ಚಿಕ್ಕಮಗಳೂರು ಕೆಡಿಪಿ ಸಭೆಯಲ್ಲಿ ಸಚಿವ ಕೆ.ಜೆ.ಜಾರ್ಜ್ ತುಮಕೂರು-ಶಿರಾ-ಚಿತ್ರದುರ್ಗ ಪ್ರತ್ಯೇಕ ಸರಕು ಸಾಗಣೆ ರೈಲ್ವೆ ಮಾರ್ಗ: ರೈಲ್ವೆ ಸಚಿವ ವಿ. ಸೋಮಣ್ಣಗೆ… Bangalore | ಗ್ಯಾರಂಟಿ ಯೋಜನೆಗಳ ಯಶಸ್ಸಿನಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ಶ್ರಮವಿದೆ: ಮುಖ್ಯಮಂತ್ರಿ… ಆಪರೇಷನ್ ಸಿಂಧೂರ್; ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಅಂತರಾತ್ಮದ ದನಿ: ಕೇಂದ್ರ…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರಿಗೆ ಸನ್ಮಾನ

01/08/2024, 01:08

ಮಂಗಳೂರು(reporterkarnataka.com): ಮಂಗಳೂರಿನ ನಾರಾಯಣಗುರು ಯುವ ವೇದಿಕೆಯ ರಜತ ಸಂಭ್ರಮ ಸಲುವಾಗಿ ನಗರದ ಪುರಭವನದಲ್ಲಿ ಬ್ರಹ್ಮಶ್ರೀ ಬಂಗಾರದ ಪದಕ ಪ್ರದಾನ, ವಿದ್ಯಾರ್ಥಿ ವೇತನ ವಿತರಣೆ, ಸಾಧನಾಶೀಲರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ನಾರಾಯಣ ಗುರು ಯುವ ವೇದಿಕೆ ಅಧ್ಯಕ್ಷ ಸುದರ್ಶನ್ ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸಾಧನೆಗಾಗಿ ವಿಧಾನ ಪರಿಷತ್ ಸದಸ್ಯರಾದ ಬಿ.ಕೆ ಹರಿಪ್ರಸಾದ್‌ರವರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ ಅವರನ್ನು ಸನ್ಮಾನಿಸುವ ಮೂಲಕ ಗೌರವಿಸಿದರು.
ಶಾಸಕ ವೇದವ್ಯಾಸ್ ಕಾಮತ್, ಮಾಜಿ ಸಚಿವ ಕೃಷ್ಣ ಜೆ ಪಾಲೆಮಾರ್, ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ನಮ್ಮ ಕುಡ್ಲ ಸಂಸ್ಥೆಯ ಮುಖ್ಯಸ್ಥ ಲೀಲಾಕ್ಷ ಕರ್ಕೆರಾ, ಡೀನೆಟ್ ಮೆನೇಜಿಂಗ್ ಡೈರೆಕ್ಟರ್ ಸಂದೇಶ್ ಪೂಜಾರಿ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಕೆ ಟಿ. ಸುವರ್ಣ, ಶಿಕ್ಷಣ ತಜ್ಞೆ ಶಶಿಲೇಖ, ಪೋಲೀಸ್ ಅಧಿಕಾರಿ ಹರೀಶ್ ಪದವಿನಂಗಡಿ, ಹೋಮಿಯೋಪತಿ ವೈದ್ಯ ಡಾ. ಶಿವಪ್ರಸಾದ್, ಶಿರ್ಡಿಬಾಬ ರಿಯಲ್ ಎಸ್ಟೇಟ್ ಮಾಲೀಕ ರತೀಂದ್ರ ನಾಥ್, ಸಂಚಾಲಕರಾದ ಸುಧಾಕರ್ ಕರ್ಕೇರ, ಎಮ್. ಎಸ್ ಕೋಟ್ಯಾನ್ ಮತ್ತಿತ್ತರರು ಉಪಸ್ಥಿತರಿದ್ದರು.
ನಾರಾಯಣಗುರು ಯುವ ವೇದಿಕೆಯ ಸಹನಿರ್ದೇಶಕ ನೀಲಯ್ಯ ಅಗರಿ ಸ್ವಾಗತಿಸಿದರು. ಸುಮಂತ್ ಸುವರ್ಣ ವಂದಿಸಿದರು. ದಿನೇಶ್ ಸುವರ್ಣ ರಾಯಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು