12:47 PM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೂತನ 31ನೇ ಎಲ್ಯಾರ್‌ಪದವು ಶಾಖೆ ಮೇ 1ರಂದು ಉದ್ಘಾಟನೆ

29/04/2024, 23:23

ಮಂಗಳೂರು(reporterkarnataka.com): ನಗರದ ಪಡೀಲ್‌ನಲ್ಲಿ ಸ್ವಂತ ಆಡಳಿತ ಕಟ್ಟಡವನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ 30 ಶಾಖೆಗಳನ್ನು ಹೊಂದಿದ್ದು, ಇದೀಗ ತನ್ನ ನೂತನ 31ನೇ ಎಲ್ಯಾರ್‌ಪದವು ಶಾಖೆಯನ್ನು ಮಂಗಳೂರಿನ ಕೊಣಾಜೆಯ ಎಲ್ಯಾರ್‌ಪದವಿನಲ್ಲಿರುವ ಹೋಲಿ ಕ್ರಾಸ್ ಚರ್ಚ್ ಬಳಿಯ ‘ಶರೂನ್ ಸ್ಟçಕ್ಚರ್’ ಕಾಂಪ್ಲೆಕ್ಸ್ನಲ್ಲಿ ಮೇ 1ರಂದು ಬುಧವಾರ ಬೆಳಿಗ್ಗೆ 9.30 ಗಂಟೆಗೆ ಸಾರ್ವಜನಿಕ ಸೇವೆಗಾಗಿ ಲೋಕಾರ್ಪಣೆಗೊಳ್ಳಲಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ_ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ವಹಿಸಲಿದ್ದಾರೆ. ವಿಧಾನಸಭೆ ಸಭಾಧ್ಯಕ್ಷ ಯು. ಟಿ. ಖಾದರ್ ನೂತನ ಶಾಖೆಯ ಉದ್ಘಾಟನೆಯನ್ನು ಮಾಡಲಿದ್ದಾರೆ. ಹೊಲಿ ಕ್ರಾಸ್ ಚರ್ಚ್, ಎಲ್ಯಾರ್‌ಪದವು ಇಲ್ಲಿಯ ಧರ್ಮಗುರುಗಳಾದ ಫಾ. ಆರ್. ಜಾನ್ ಡಿ ಸೋಜ ಅವರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್ ಕುತ್ತಾರು ಇದರ ಉಪಾಧ್ಯಕ್ಷ ಡಿ. ಮಹಾಬಲ ಹೆಗ್ಡೆ ಮಾಗಣ್ತಡಿ ಅವರು ಭದ್ರತಾಕೋಶ ಉದ್ಘಾಟನೆ ಮಾಡಲಿದ್ದಾರೆ. ಸಿ.ಎಸ್.ಐ ಬೆತಾನೀಯ ಚರ್ಚ್, ಬೆಳ್ಮ, ಕೊಣಾಜೆ ಇಲ್ಲಿಯ ಧರ್ಮಗುರುಗಳಾದ ರೆವರೆಂಡ್ ವಿನಯಲಾಲ್ ಬಂಗೇರ ಅವರು ನಿರಖು ಠೇವಣಿ ಪತ್ರ ಬಿಡುಗಡೆ ಮಾಡಲಿದ್ದಾರೆ. ಕೊಣಾಜೆ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಗೀತಾ ದಾಮೋದರ್ ಅವರು ಗಣಕೀಕೃತ ಬ್ಯಾಂಕಿಂಗ್‌ಗೆ ಚಾಲನೆ ನೀಡಲಿದ್ದಾರೆ. ಅಂಬ್ಲಮೊಗರು ಗ್ರಾಮ ಪಂಚಾಯತ್‌ನ ಇಕ್ಬಲ್ ಅವರು ಇ-ಮುದ್ರಾಂಕ ಸೇವೆಗೆ ಚಾಲನೆ ನೀಡಲಿದ್ದಾರೆ. ಸಹಕಾರ ಸಂಘಗಳ ಉಪನಿಬಂಧಕರಾದ ರಮೇಶ್ ಎಚ್.ಎನ್, ಅವರು ಮೈಕ್ರೋ ಸಾಲ ಯೋಜನೆಗೆ ಚಾಲನೆ ನೀಡಲಿದ್ದಾರೆ. ಬ್ರಹ್ಮಶ್ರಿ ನಾರಾಯಣಗುರು ಸೇವಾ ಸಂಘ, ಗ್ರಾಮ ಚಾವಡಿ ಇದರ ಅಧ್ಯಕ್ಷ ರವೀಂದ್ರ ಬಂಗೇರ ಅವರು ಆವರ್ತನ ಠೇವಣಿಗೆ ಚಾಲನೆ ನೀಡಲಿದ್ದಾರೆ. ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರ (ರಿ.) ಎಲ್ಯಾರ್‌ಪದವು, ಇದರ ಅಧ್ಯಕ್ಷ ಚಂದ್ರಹಾಸ್ ನಾಯ್ಕ್ ಅವರು ಉಳಿತಾಯ ಖಾತೆಗೆ ಚಾಲನೆ ನೀಡಲಿದ್ದಾರೆ. ಎಲ್ಯಾರ್‌ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಎಡ್‌ಲೈನ್ ಐಮನ್, ಪಜೀರ್ ಗೋಶಾಲೆಯ ಟ್ರಸ್ಟಿಯಾದ ಶಿವಪ್ರಸಾದ್, ನಿವೃತ್ತ ಶಿಕ್ಷಕರಾದ ರವೀಂದ್ರ ರೈ ಕಲ್ಲಿಮಾರು ಹಾಗೂ ಕಟ್ಟಡದ ಮಾಲಕರಾದ ರೆನೋಲ್ಡ್ ಜಿ ಅಮ್ಮಣ್ಣ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನೂತನ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ ನಿರಖು ಠೇವಣಿಯ ಮೇಲೆ ವಿಶೇಷ ಬಡ್ಡಿ ದರವನ್ನು ನೀಡಲಾಗುವುದು. ಇ-ಮುದ್ರಾಂಕ, ಚಿನ್ನಾಭರಣ ಸಾಲ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಲಭ್ಯವಿದ್ದು, ಸಂಘದಲ್ಲಿ ಈಗಾಗಲೇ ಕೋರ್-ಬ್ಯಾಂಕಿಂಗ್ ಸೌಲಭ್ಯ ಅಳವಡಿಸಲಾಗಿದೆ. ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ ಜನರಲ್ ಇನ್ಸುರೆನ್ಸ್ ಕಂಪೆನಿಯ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೌಮ್ಯ ವಿಜಯ್‌ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು