2:26 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅಥಣಿ: ಹೆಸ್ಕಾಂ ದಿವ್ಯ ನಿರ್ಲಕ್ಷ್ಯ; ವಿದ್ಯುತ್ ಅವಘಡಕ್ಕೆ 2 ಜೀವ ಬಲಿ

13/11/2022, 10:29

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬದುಕು ಕಟ್ಟಿಕೊಳ್ಳಲು ಬಂದ ಬಡ ಜೀವಗಳು HESCOM ಇಲಾಖೆಯ ದಿವ್ಯ ನಿರ್ಲಕ್ಷಕ್ಕೆ ಈಗ ಬಲಿಯಾಗಿವೆ.
ಸಬ್ ಕಾಂಟ್ರಾಕ್ಟ್ ಸಮರ್ಥ್ ಎಲೆಕ್ಟ್ರಿಕಲ್ ಗುತ್ತಿಗೆದಾರ ಜತೆ ಮೇನ್ ಲೈನ್ ಕೆಲಸ ಮಾಡುವ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಮೇನ್ ಲೈನ್ ತಂತಿ ಜೋಡಿಸುವ ಕೆಲಸ ಮಾಡುವ ಸಮಯದಲ್ಲಿ ವಿದ್ಯುತ್ ಹರದಾಡಿ, ವಿದ್ಯುತ್ ಕಂಬ ಹತ್ತಿದ ಇಬ್ಬರು ಯುವಕರ ಜೀವ ಬಲಿ ಪಡೆದಿದೆ.


ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಹಿಡಕಲ್ ಮೂಲದ ಹಣಮಂತ ಮುಗುದುಮ್ (34) ಹಾಗೂ ಅಶೋಕ್ ಮಾಳಿ (35)
ಮೃತ ದುರ್ದೈವಿಗಳು ಮೇನ್ ಲೈನ್ ವಿದ್ಯುತ್ ಅಂಟಿಕೊಂಡು ನಂತರ ಇಬ್ಬರು ಸ್ಥಳದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾರೆ. ನಂತರ ಅಥಣಿ ಆಸ್ಪತ್ರೆ ಸೇರುವಷ್ಟರಲ್ಲಿ ಕೊನೆ ಉಸಿರು ಎಳೆದಿದ್ದಾರೆ.

ಬೆಳಗಾವಿ ಜೆಲ್ಲೆಯ ಅಥಣಿ ತಾಲೂಕಿನ ಬಳ್ಳಿಗೇರಿ 110/11 ವಿದ್ಯುತ್ ವಿತರಣಾ ಕೇಂದ್ರ ಹತ್ತಿರದಲ್ಲೇ ಕೆಲಸ ವೇಳೆ ಈ ಘಟನೆ ಸಂಭವಿಸಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕೆಲಸ ಪ್ರರಂಬಿಸುವ ಮುಂಚೆ ಏರಿಯಾ ಲೈನ್ ಮೆನ್ ಕಡೆಯಿಂದ ಎಲ್ ಸಿ ಪಡೆಯಲಾಗಿತ್ತು..! ಎಲ್ ಸಿ ಪಡೆದ ಸುಮಾರು ಎರಡು ಘಂಟೆಯ ವರೆಗೆ ಟ್ರ್ಯಾಕ್ಟರ್ ಸಹಾಯದಿಂದ ಕಂಬ ಹತ್ತಿ ತಂತಿ ಜೋಡಣೆ ಕೆಲಸ ನಡೆದಿತ್ತು.

ಎಲ್ ಸಿ ವಾಪಸ ಪಡೆಡೆಯಿಲ್ಲ ಆದರೂ ವಿದ್ಯುತ್ ಸಪ್ಲಯ್ ಹೇಗೆ ಬಂತು ಅನ್ನೋದರ ಬಗ್ಗೆ ಮಾಹಿತಿ ಲಭ್ಯವಾಗಬೇಕಾಗಿದೆ.
ಅಥಣಿ ವಲಯದ HESCOM ಇಲಾಖೆಯ ಸೆಕ್ಷನ್ ಆಫೀಸರ್ ದಾಸರ ಅವರನ್ನು ದೂರವಾಣಿ ಮುಕಾಂತರ ಸಂಪರ್ಕಿಸೀದಾಗ ವಿದ್ಯುತ್ ಹರಿದಾಡಿದ ಬಗ್ಗೆ ನಿಖರ ಕಾರಣ ಗೊತ್ತಾಗಿಲ್ಲ ಪರಿಶೀಸಲಾಗುತ್ತಿದೆ ಅಂತಾ ಮಾಹಿತಿ ನೀಡಿದ್ದಾರೆ..


ಒಟ್ಟಿನಲ್ಲಿ HESCOM ಇಲಾಖೆಯ ದಿವ್ಯ ನಿರ್ಲಕ್ಷಕ್ಕೆ ಬಾಳಿ ಬದುಕಬೇಕಿದ್ದ ಇಬ್ಬರ ಯುವಕನ್ನು ಬಲಿ ಪಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು