7:39 PM Thursday13 - November 2025
ಬ್ರೇಕಿಂಗ್ ನ್ಯೂಸ್
Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ…

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು