4:37 AM Wednesday7 - January 2026
ಬ್ರೇಕಿಂಗ್ ನ್ಯೂಸ್
ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ…

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು