1:31 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು