5:08 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು