6:56 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಎಟಿಎಂ ಕಳವು ಯತ್ನ: ಜನರಿಂದ ತಪ್ಪಿಸಿಕೊಂಡು ಓಡಲೆತ್ನಿಸಿದ ಕಳ್ಳರು ಮಾಡಿದ್ದೇನು? ಪೊಲೀಸರಿಗೆ ಸಿಕ್ಕಿ ಬಿದ್ದದ್ದು ಹೇಗೆ?

28/02/2022, 15:34

ದೊಡ್ಡಬಳ್ಳಾಪುರ(reporterkarnataka.com): ಇನ್ನೇನು ಎಟಿಎಂ ಯಂತ್ರ ಒಡೆದು ಹಣ ಎಗರಿಸಬೇಕೆನ್ನುವಷ್ಟರಲ್ಲಿ ಸಾರ್ವಜನಿಕರ ಕಣ್ಣಿಗೆ ಬಿದ್ದ ಕಳ್ಳರಿಬ್ಬರು ತಕ್ಷಣ ಕಾಲಿಗೆ ಬುದ್ಧಿ ಹೇಳುತ್ತಾರೆ. ಆದರೂ ಜನ ಬೆನ್ನಟ್ಟುತ್ತಾರೆ. ಅವರಿಂದ ತಪ್ಪಿಸಿಕೊಳ್ಳಲು ಅದೇ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದಕ್ಕೆ ಕೈಅಡ್ಡಹಾಕಿದ ಕಳ್ಳರು ಡ್ರಾಪ್ ಕೇಳಿದ್ರು.

ಕಾರು ನಿಲ್ಲುತ್ತಿದ್ದಂತೆ ಅದರೊಳಗೆ ಹತ್ತಿ ಅಬ್ಬಾ ಬಚಾವಾದೆವು ಎಂದು ನಿಟ್ಟುಸಿರು ಬಿಡುತ್ತಿದ್ದಂತೆ ಆ ಕಾರು ನೇರವಾಗಿ ಪೊಲೀಸ್​ ಠಾಣೆ ಮುಂದೆ ನಿಲ್ಲುತ್ತೆ. ಅರೇ ಇದ್ಹೇನಿದು..? ಎಂದು ಕಳ್ಳರು ಪಿಳಿಪಿಳಿ ಕಣ್ಣುಬಿಟ್ಟು ನೋಡುವಷ್ಟರಲ್ಲಿ ಗೊತ್ತಾಗುತ್ತೇ ತಾವು ಡ್ರಾಪ್​ ಕೇಳಿದ್ದು ಪೊಲೀಸರನ್ನೇ..!

ಇದು ಯಾವ ಸಿನಿಮಾ ಕಥೆಯೂ ಅಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಳೆಕೋಟೆಯೊಂದರ ಎಟಿಎಂ ಕೇಂದ್ರದಲ್ಲಿ ಶನಿವಾರ ದರೋಡೆ ಪ್ರಯತ್ನ ನಡೆಸಿದ ಕಳ್ಳರಿಬ್ಬರ ರಿಯಲ್ ಕಥೆ.

ಪ್ರಕರಣ ಸಂಬಂಧ ನೆಲಮಂಗಲ ತಾಲೂಕು ಅರಿಶಿನಕುಂಟೆ ನಿವಾಸಿಗಳಾದ ಸಚಿನ್ ಹಾಗೂ ಗಗನ್ ಎಂಬುವರನ್ನು ಬಂಧಿಸಿರುವ ದೊಡ್ಡಬಳ್ಳಾಪುರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮೇಳೆಕೋಟೆ ಎಂಟಿಬಿ ಕೇಂದ್ರ ದರೋಡೆಗೆ ಯತ್ನಿಸಿದ ಕಳ್ಳರಿಬ್ಬರು ಜನರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿದ್ದರು. ಇದೇ ವೇಳೆ ಮಾಹಿತಿ ಪಡೆದ ಪೊಲೀಸರು ಖಾಸಗಿ ಕಾರಿನಲ್ಲಿ ಅದೇ ಮಾರ್ಗದಲ್ಲಿ ಬರುತ್ತಿದ್ದರು. ಈ ಬಗ್ಗೆ ಅರಿವೇ ಇಲ್ಲದ ಕಳ್ಳರು ಜನರಿಂದ ತಪ್ಪಿಸಿಕೊಳ್ಳಲು ಪೊಲೀಸರಿದ್ದ ಕಾರಿಗೆ ಕೈ ಅಡ್ಡಹಾಕಿ ಡ್ರಾಪ್​ ಕೇಳಿದ್ದರು. ಕಳ್ಳರನ್ನು ಹಿಡಿಯಲು ಬಂದ ಪೊಲೀಸರಿಗೆ ತುಪ್ಪ ಜಾರಿ ರೊಟ್ಟಿಗೆ ಬಿದ್ದಂತಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು