2:44 PM Tuesday10 - February 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆ 3ನೇ ವಾರ್ಷಿಕೋತ್ಸವ; ಗ್ರಾಹಕರ ಸಭೆ

10/02/2026, 14:44

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಶಾಖೆಯಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ತುಳುಪುಲೆ, ಶ್ರೀ ರಾಜು ಪೂಜಾರಿ , ಶ್ರೀ ವಿಶ್ವನಾಥ್ ಕುದ್ಯಾಡಿ, ಶ್ರೀ ಪೂರ್ನೇಶ್, ಶ್ರೀ ರತ್ನಾಕರ ಕೋಟ್ಯಾನ್, ಶ್ರೀ ಅಜುರುದ್ದೀನ್, ಶ್ರೀ ದಯಾಕರ ರೈ, ಶ್ರೀಮತಿ ಜಲಜ ವಿ. ಸಾಲ್ಯಾನ್, ಶ್ರೀಮತಿ ಶೋಭ ಹಾಗೂ ಶ್ರೀ ನೀಲಯ್ಯ ಗೌಡ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ಮನೋಹರ ಶೆಟ್ಟಿರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಿಬ್ಬಂದಿಗಳು ಗುಣಮಟ್ಟದ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದಾರೆ. ಇನ್ನೂ ಹೆಚ್ಚಿನ ಸೇವೆಯನ್ನು ನೀಡುವಂತಾಗಲಿ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸದಸ್ಯರಾದ ಶ್ರೀ ನೀಲಯ್ಯ ಗೌಡ ರವರು ಮಾತನಾಡಿ “ಶಾಖೆ ಆರಂಭದಿಂದಲು ಉತ್ತಮ ವ್ಯವಹಾರ ನಡೆಸುತ್ತಿದ್ದು, ಸಂಘದ ಸದಸ್ಯರ ಬೇಡಿಕೆಗಳನ್ನು ಈಡೇರಿಸುತ್ತಿದೆ” ಎಂದು ಶ್ಲಾಘಿಸಿದರು.
ಸದಸ್ಯರಾದ ಶ್ರೀಮತಿ ಸುರೇಖ ರವರು ಮಾತನಾಡಿ “ ಉಳಿತಾಯದ ದೃಷ್ಟಿಯಿಂದ ಆವರ್ತನ ಖಾತೆಯಲ್ಲಿ ಹಣವನ್ನು ಉಳಿತಾಯ ಮಾಡಿದ್ದು, ಇದರಿಂದ ನನಗೆ ತುಂಬಾ ಪ್ರಯೋಜನವಾಗಿದೆ” ಎಂದು ಸಂಘದ ಉಳಿತಾಯ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ, “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಇಂದಿಗೆ 33ನೇ ಶಾಖೆಯನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪಾಲುಬಂಡವಾಳವು 22.5 ಲಕ್ಷದಿಂದ ಪ್ರಾರಂಭವಾಗಿ ಇಂದು 300 ಕೋಟಿ ಠೇವಣಿಯಾಗಲು ಗ್ರಾಹಕರೇ ಕಾರಣ ಎಂದು ಪ್ರಶಂಸಿದರು. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಅಳದಂಗಡಿ ಶಾಖೆಯಲ್ಲೂ ಆರೋಗ್ಯ ಶಿಬಿರವನ್ನು ನಡೆಸಲ್ಲಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಶ್ರೀ ಗೋಪಾಲ್ ಎಂ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಸಂಘದ ಅಳದಂಗಡಿ ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಕಾವ್ಯಶ್ರೀ ಎಸ್. ಸ್ವಾಗತಿಸಿದರು. ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಲೋಶಿತ ಅವರು ವಂದಿಸಿದರು. ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಸ್ವಾತಿ ಎಸ್. ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು