8:29 PM Saturday18 - October 2025
ಬ್ರೇಕಿಂಗ್ ನ್ಯೂಸ್
ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ…

ಇತ್ತೀಚಿನ ಸುದ್ದಿ

ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ

18/10/2025, 20:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಕಾರ್ಮಿಕ ಇಲಾಖೆಯಲ್ಲಿ ತಾನು ಸೀನಿಯರ್ ಲೇಬರ್ ಇನ್ಸ್ಪೆಕ್ಟರ್ ಎಂದು ಶಿವರಾಜು ಎನ್ನುವ ವ್ಯಕ್ತಿ ಮೊಬೈಲ್ ಸಂಖ್ಯೆ 8150816922 ಇಂದ ಗೋಣಿಕೊಪ್ಪದ ಉದ್ಯಮಿ ಚಂದನ್ ಕಾಮತ್ ರವರಿಗೆ ಕರೆ ಮಾಡಿ, ತಮ್ಮ ಸಂಸ್ಥೆಯ ಕಾರ್ಮಿಕ ಲೈಸನ್ಸ್ ನ ಬಾಬ್ತು ₹11350/- ಈ ಕೂಡಲೇ ಫೋನ್ ಪೇ ಮುಖಾಂತರ ಕಳುಹಿಸಿಕೊಡಬೇಕೆಂದು ಕೇಳಿರುತ್ತಾರೆ.
ಚಂದನ್ ರವರು ಫೋನ್ ಪೇ ಮಾಡಲಾಗುವುದಿಲ್ಲ, ತಾನು ವಿರಾಜಪೇಟೆ ಕಚೇರಿಗೆ ಬಂದು ಬಾಬ್ತನ್ನು ಕಟ್ಟುತೆನೆಂದು ಹೇಳಿ ವಿರಾಜಪೇಟೆಗೆ ತೆರಳುತ್ತಾರೆ.
ಕಾವೇರಿ ಸಂಕ್ರಮಣದ ಪ್ರಯುಕ್ತ ವಿರಾಜಪೇಟೆ ಕಾರ್ಮಿಕ ಕಚೇರಿ ರಜೆಯಿದ್ದು, ಶಿವರಾಜು ಎಂಬ ವ್ಯಕ್ತಿಯನ್ನು ಕರೆ ಮಾಡಿದರೆ ಆತ ಸಂಪರ್ಕಕ್ಕೆ ಸಿಗಲಿಲ್ಲ.
ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸ್ನೇಹಿತರಾದ ವಿರಾಜಪೇಟೆ ಗಾಯತ್ರಿ ಭವನ ಹೋಟೆಲಿನ ಮಾಲೀಕರಾದ ಮುರಳಿ ಶೆಣೈ ಹಾಗೂ ಶಬರೀಶ್ ರವರು ಕಾರ್ಮಿಕ ಇಲಾಖೆಯ ಅಧಿಕಾರಿಯಾದ ನವೀನ್ ರವರನ್ನು ವಿಚಾರಿಸಿದ ವೇಳೆ ಶಿವರಾಜು ಅನ್ನುವಂತಹ ಯಾವುದೇ ವ್ಯಕ್ತಿ ಇಲಾಖೆಯಲ್ಲಿ ಹುದ್ದೆಯಲ್ಲಿ ಇಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಇದೇ ರೀತಿ ಈ ವಂಚಕ ಇನ್ನಷ್ಟು ವಂಚನೆ ಮಾಡಬಹುದು ಎಂಬ ಉದ್ದೇಶದಿಂದ ಚಂದನ್ ಕಾಮತ್
ಮಡಿಕೇರಿಯ ಸೈಬರ್ ಪೊಲೀಸ್ ಸ್ಟೇಷನ್ ನಲ್ಲಿ ಈ ನಕಲಿ ವ್ಯಕ್ತಿಯ ಮೇಲೆ ಪುಕಾರು ನೀಡಿದ್ದಾರೆ.
ಸಾರ್ವಜನಿಕರು ಇಂತಹ ನಕಲಿ ಅಧಿಕಾರಿ ವಸೂಲಿ ಮಾಡಲು ಪ್ರಯತ್ನಿಸುವ ದುಷ್ಕರ್ಮಿಗಳ ಬಗ್ಗೆ ಎಚ್ಚರ ವಹಿಸಬೇಕು, ಸಂಶಯ ಕಂಡು ಬಂದಲ್ಲಿ ದೂರು ನೀಡುವಂತೆ ಕಾರ್ಮಿಕ ಇಲಾಖೆಯವರು ಹಾಗೂ ಸೈಬರ್ ಪೊಲೀಸ್ ಇಲಾಖೆಯವರು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು