11:06 PM Sunday7 - December 2025
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ

ಇತ್ತೀಚಿನ ಸುದ್ದಿ

ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ

18/10/2025, 20:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಕಾರ್ಮಿಕ ಇಲಾಖೆಯಲ್ಲಿ ತಾನು ಸೀನಿಯರ್ ಲೇಬರ್ ಇನ್ಸ್ಪೆಕ್ಟರ್ ಎಂದು ಶಿವರಾಜು ಎನ್ನುವ ವ್ಯಕ್ತಿ ಮೊಬೈಲ್ ಸಂಖ್ಯೆ 8150816922 ಇಂದ ಗೋಣಿಕೊಪ್ಪದ ಉದ್ಯಮಿ ಚಂದನ್ ಕಾಮತ್ ರವರಿಗೆ ಕರೆ ಮಾಡಿ, ತಮ್ಮ ಸಂಸ್ಥೆಯ ಕಾರ್ಮಿಕ ಲೈಸನ್ಸ್ ನ ಬಾಬ್ತು ₹11350/- ಈ ಕೂಡಲೇ ಫೋನ್ ಪೇ ಮುಖಾಂತರ ಕಳುಹಿಸಿಕೊಡಬೇಕೆಂದು ಕೇಳಿರುತ್ತಾರೆ.
ಚಂದನ್ ರವರು ಫೋನ್ ಪೇ ಮಾಡಲಾಗುವುದಿಲ್ಲ, ತಾನು ವಿರಾಜಪೇಟೆ ಕಚೇರಿಗೆ ಬಂದು ಬಾಬ್ತನ್ನು ಕಟ್ಟುತೆನೆಂದು ಹೇಳಿ ವಿರಾಜಪೇಟೆಗೆ ತೆರಳುತ್ತಾರೆ.
ಕಾವೇರಿ ಸಂಕ್ರಮಣದ ಪ್ರಯುಕ್ತ ವಿರಾಜಪೇಟೆ ಕಾರ್ಮಿಕ ಕಚೇರಿ ರಜೆಯಿದ್ದು, ಶಿವರಾಜು ಎಂಬ ವ್ಯಕ್ತಿಯನ್ನು ಕರೆ ಮಾಡಿದರೆ ಆತ ಸಂಪರ್ಕಕ್ಕೆ ಸಿಗಲಿಲ್ಲ.
ನಂತರ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸ್ನೇಹಿತರಾದ ವಿರಾಜಪೇಟೆ ಗಾಯತ್ರಿ ಭವನ ಹೋಟೆಲಿನ ಮಾಲೀಕರಾದ ಮುರಳಿ ಶೆಣೈ ಹಾಗೂ ಶಬರೀಶ್ ರವರು ಕಾರ್ಮಿಕ ಇಲಾಖೆಯ ಅಧಿಕಾರಿಯಾದ ನವೀನ್ ರವರನ್ನು ವಿಚಾರಿಸಿದ ವೇಳೆ ಶಿವರಾಜು ಅನ್ನುವಂತಹ ಯಾವುದೇ ವ್ಯಕ್ತಿ ಇಲಾಖೆಯಲ್ಲಿ ಹುದ್ದೆಯಲ್ಲಿ ಇಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ. ಸಾರ್ವಜನಿಕರಿಗೆ ಇದೇ ರೀತಿ ಈ ವಂಚಕ ಇನ್ನಷ್ಟು ವಂಚನೆ ಮಾಡಬಹುದು ಎಂಬ ಉದ್ದೇಶದಿಂದ ಚಂದನ್ ಕಾಮತ್
ಮಡಿಕೇರಿಯ ಸೈಬರ್ ಪೊಲೀಸ್ ಸ್ಟೇಷನ್ ನಲ್ಲಿ ಈ ನಕಲಿ ವ್ಯಕ್ತಿಯ ಮೇಲೆ ಪುಕಾರು ನೀಡಿದ್ದಾರೆ.
ಸಾರ್ವಜನಿಕರು ಇಂತಹ ನಕಲಿ ಅಧಿಕಾರಿ ವಸೂಲಿ ಮಾಡಲು ಪ್ರಯತ್ನಿಸುವ ದುಷ್ಕರ್ಮಿಗಳ ಬಗ್ಗೆ ಎಚ್ಚರ ವಹಿಸಬೇಕು, ಸಂಶಯ ಕಂಡು ಬಂದಲ್ಲಿ ದೂರು ನೀಡುವಂತೆ ಕಾರ್ಮಿಕ ಇಲಾಖೆಯವರು ಹಾಗೂ ಸೈಬರ್ ಪೊಲೀಸ್ ಇಲಾಖೆಯವರು ಮನವಿ ಮಾಡಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು