7:38 PM Sunday21 - June 2026
ಬ್ರೇಕಿಂಗ್ ನ್ಯೂಸ್
Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ…

ಇತ್ತೀಚಿನ ಸುದ್ದಿ

ಕಡಲನಗರಿಯಲ್ಲಿ ಡ್ರಗ್ಸ್ ಮಾರಾಟ ಯತ್ನ: ತುಮಕೂರಿನ ಇಬ್ಬರು ನಿವಾಸಿಗಳ ಬಂಧನ; ಎಂಡಿಎಂ, ಗಾಂಜಾ ವಶ

02/12/2025, 22:36

ಮಂಗಳೂರು(reporterkarnataka.com):ಕಾವೂರು ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಫಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂಡಿಎಂ ಮಾರಾಟ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ತುಮಕೂರು ಪಿ.ಹೆಚ್. ಕಾಲೋನಿಯ 13 ನೇ ಕ್ರಾಸ್ ನ ನಿಮ್ರಾ ಮಸೀದಿ ಬಳಿಯ ನಿವಾಸಿ ಶಾಫಿ ಅಹ್ಮದ್ (40) ಹಾಗೂ ತುಮಕೂರು ಕೋತಿಪುರದ ಅಪೋಲೋ ಮೆಡಿಕಲ್ ರಸ್ತೆಯ ಅಜೀಝ್ ಮಂಜಿಲ್ ನ ನಿವಾಸಿ ಮೊಹಮ್ಮದ್ ಸಮೀರ್ (20) ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬಂಗ್ರ-ಕೂಳೂರು ಎಂಬಲ್ಲಿ ಫಲ್ಗುಣಿ ನದಿಯ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದ ಪಣಂಬೂರು ಎಸಿಪಿ ಶ್ರೀಕಾಂತ್ ಕೆ.,ಕಾವೂರು ಪಿಐ ರಾಘವೇಂದ್ರ ಬೈಂದೂರ್ , ಕಾವೂರು
ಪಿಎಸ್ ಐ ಮಲ್ಲಿಕಾರ್ಜುನ್,ಎಎಸ್ ಐ ಚಂದ್ರಶೇಖರ್, ಸಿಬ್ಬಂದಿಗಳಾದ ಲರೆಜಿ ಎಂ,ಹಾಲೇಶ್ ನಾಯ್ಕ್, ರಿಯಾಜ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 70,000 ರೂ. ಮೌಲ್ಯದ
12 ಗ್ರಾಂ ಎಂಡಿಎಂ ಹಾಗೂ
ಸುಮಾರು 10,000 ಮೌಲ್ಯದ 275 ಗ್ರಾಂ ಗಾಂಜಾ, 2 ಮೊಬೈಲ್ ಪೋನ್ ಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳು ಗಾಂಜಾ ಮತ್ತು ಎಂ.ಡಿ.ಎಂ ನ್ನು ಬೆಂಗಳೂರಿನಲ್ಲಿ ನಿಗ್ರೋಗಳ ಬಳಿ ಖರೀದಿಸಿರುವುದಾಗಿ ತಿಳಿಸಿದ್ದಾರೆ.
ಆರೋಪಿ ಶಾಫಿ ಅಹ್ಮದ್ ಎಂಬಾತನ ಮೇಲೆ ಒಟ್ಟು 9 ಪ್ರಕರಣಗಳು ದಾಖಲಾಗಿದ್ದು ಆತನು ಹಲವು ಪ್ರಕರಣಗಳಲ್ಲಿನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು ನ್ಯಾಯಾಲಯವು ವಾರಂಟ್ ಹಾಗೂ ಪ್ರೊಕ್ಲಮೇಶನ್ ಜ್ಯಾರಿಗೊಳಿಸಿರುತ್ತದೆ.
.

ಇತ್ತೀಚಿನ ಸುದ್ದಿ

ಜಾಹೀರಾತು