9:25 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.…

ಇತ್ತೀಚಿನ ಸುದ್ದಿ

ಕೇಪು ಉಳ್ಳಾಲ್ತಿ ಕ್ಷೇತ್ರದ ಕೋಳಿ ಅಂಕ ತಡೆಗೆ ಯತ್ನ ಹಿಂದೂ ವಿರೋಧಿ ನೀತಿ: ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪ

22/12/2025, 18:40

ಮಂಗಳೂರು(reporterkarnataka.com): ರಾಜ್ಯದ ಕಾಂಗ್ರೆಸ್ ಸರಕಾರ ತುಘಲಕ್ ಶಾಹಿ ಆಡಳಿತ ನಡೆಸುತ್ತಿದೆ. ಬಂಟ್ವಾಳ ತಾಲೂಕಿನ ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ 800 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಕೋಳಿ ಅಂಕದಲ್ಲಿ ಜೂಜು, ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪಿಸಿ ಪೊಲೀಸರ ಮೂಲಕ ತಡೆಯಲು ಯತ್ನಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.

ನಗರದ ಕೊಡಿಯಾಲ್ ಬೈಲಿನಲ್ಲಿರುವ ದ.ಕ. ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ರೀತಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಘಾಸಿ ಮಾಡಿದರೆ ಸಹಿಸಲಾಗದು.
ರಾಜ್ಯದಲ್ಲಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತ ಬಂದ ಬಳಿಕ ನಿರಂತರವಾಗಿ ಹಿಂದೂ ವಿರೋಧಿ ನೀತಿಗಳನ್ನು ಅಳವಡಿಸಿಕೊಂಡು ಬರಲಾಗುತ್ತಿದೆ. ಹಿಂದೂಗಳ ನಂಬಿಕೆ, ಹಿಂದು ಕಾರ್ಯಕರ್ತರ ನಿಯಂತ್ರಣ, ಹಿಂದೂ ಸಂಘಟನೆಗಳನ್ನು ದಮನಿಸುವ ಕೆಲಸ ನಡೆಯುತ್ತಿದ್ದು, ಇದೀಗ ಕೋಳಿ ಅಂಕ, ಯಕ್ಷಗಾನ, ಕಂಬಳದ ಸಂದರ್ಭವೂ ಪ್ರಕರಣ ದಾಖಲಿಸುವ ಕೃತ್ಯ ನಡೆಯುತ್ತಿರುವುದು ನಾಚಿಕೆಗೇಡು ಎಂದರು.
ಧಾರ್ಮಿಕ ನಂಬಿಕೆಗಳಿಗೆ ತೊಂದರೆಯಾಗುವ ಯಾವುದೇ ಕೃತ್ಯ ನಡೆಯುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಸಭೆಯಲ್ಲಿ ಹೇಳಿಕೆ ನೀಡಿದ ಹೊರತಾಗಿಯೂ ಇಂತಹ ಕೃತ್ಯಗಳು ನಡೆಯುತ್ತಿವೆ. ಇನ್ನಾದರೂ ಇಂತಹ ದಮನ ಪ್ರಕ್ರಿಯೆಗಳ ಬಗ್ಗೆ ಉಸ್ತುವಾರಿ ಸಚಿವರು ಗಂಭೀರವಾಗಿ ಪರಿಗಣಿಸಬೇಕು. ಇನ್ನು ಅಲ್ಲಲ್ಲಿ ಜಾತ್ರಾಮಹೋತ್ಸವ, ಕೋಲ, ನೇಮ ನಡೆಯಲಿದ್ದು, ಇಂತಹ ಕುಂಟು ನೆಪವೊಡ್ಡಿ ಹಿಂದೂ ನಂಬಿಕೆಗೆ ಘಾಸಿಗೊಳಿಸಿದರೆ, ಸುಮ್ಮನಿರುವುದಿಲ್ಲ. ಕೇಪು ಉಳ್ಳಾಲ್ತಿ ಕೋಳಿ ಅಂಕ ಪ್ರಕರಣದ ಕುರಿತಂತೆಯೂ ಕಾನೂನಿನ ಮೂಲಕ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಕೇಪು ಕ್ಷೇತ್ರದಲ್ಲಿ ಜೂಜಿನ ವ್ಯವಸ್ಥೆ ಇಲ್ಲ. ಇಷ್ಟು ವರ್ಷಗಳಿಂದ ಅಲ್ಲಿ ನಡೆಯುತ್ತಿದ್ದ ಕೋಳಿ ಅಂಕವನ್ನು ಈ ವರ್ಷ ಹಠಾತ್ತಾಗಿ ತಡೆಯಲು ಪ್ರಯತ್ನಿಸಿರುವುದಲ್ಲದೆ, ಪಕ್ಷದ ಜಿಲ್ಲಾಧ್ಯಕ್ಷರ ಮೇಲೂ ಪ್ರಾಣಿ ಹಿಂಸೆ ಪ್ರಕರಣ ದಾಖಲಾಗಿದೆ. ಹಬ್ಬ ಹರಿದಿನಗಳಿಗೆ ಸಂಬಂಧಿಸಿ ಅಲ್ಲಲ್ಲಿ ಕುರಿ ಕೋಳಿ ಬಲಿ ನೀಡುವ ಪದ್ಧತಿ ಇದ್ದು, ಅದನ್ನು ನಿಲ್ಲಿಸುವ ತಾಕತ್ತು ಸರಕಾರ ಅಥವಾ ಪೊಲೀಸ್ ಅಧಿಕಾರಿಗಳಿಗೆ ಇದೆಯೇ ಎಂದು ಪ್ರಶ್ನಿಸಿದರು.
ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ನಾವೂ ಈ ಹಿಂದೆ ಮೂರು ವರ್ಷ ಸರಕಾರ ನಡೆಸಿದ್ದೇವೆ. ನಮ್ಮ ಅವಧಿಯಲ್ಲಿ ಒಂದೇ ಒಂದು ಇಂತಹ ಘಟನೆ ನಡೆದಿಲ್ಲ. ಕಾಂಗ್ರೆಸ್ ಸರಕಾರಕ್ಕೆ ಅಧಿಕಾರಿಗಳನ್ನು ಸೇರಿಸಿ ಇಂತಹ ತಪ್ಪುಗಳನ್ನು ಸರಿಪಡಿಸಲು ಆಗುವುದಿಲ್ಲ ಎಂದಾದರೆ ಇದು ಕೇವಲ ನಮ್ಮ ಧಾರ್ಮಿಕ ಭಾನನೆಗಳಿಗೆ ಹೊಡೆತ ನೀಡುವ ವಿಚಾರ. ಕೋಳಿ ಅಂಕಕ್ಕೆ ಸಾವಿರಾರು ಜನ ಹೋಗುತ್ತಾರೆ. ಅವೆರಲ್ಲರ ಮೇಲೆ ಪ್ರಕರಣ ದಾಖಲಿಸಲು ಪೆನ್ನು ಪುಸ್ತಕ ಇದೆಯೇ ಎಂದು ಪ್ರಶ್ನಿಸಿದರು.

ಮಂಗಳೂರಿನಲ್ಲಿ 50ಕ್ಕೂ ಅಧಿಕ ಪ್ರಾಣಿ ವಧಾ ಕೇಂದ್ರಗಳಿವೆ. ಅಲ್ಲಿ ಯಾವ ಎಫ್‌ಐಆರ್ ಯಾಕೆ ದಾಖಲಿಸುವುದಿಲ್ಲ ಎಂದವರು ಪ್ರಶ್ನಿಸಿದರ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ನಾಯಕರಾದ ಅರುಣ್ ಶೇಟ್, ಜಗದೀಶ್ ಆಳ್ವ, ಯತೀಶ್ ಅರ್ವಾರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು