8:49 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ ಪರಾರಿ

23/10/2025, 15:55

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkatnstaka@gmail.com

ಸೋಮವಾರಪೇಟೆ ತಾಲೂಕಿನ ಉದ್ಯಮಿಯೊಬ್ಬರ ಕೊಲೆ ಯತ್ನ ನಡೆದಿದೆ. ಇಲ್ಲಿನ ಹ್ಯಾಂಡ್ ಪೋಸ್ಟ್ ಬಳಿಯ ಪೆಟ್ರೋಲ್ ಬಂಕ್ ಮಾಲೀಕ ಹಾಗೂ ಕೊಡ್ಲಿಪೇಟೆ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಜೆ. ಕೆ. ತೇಜ ಕುಮಾರ್ ಅವರು ಕಾರಿನಲ್ಲಿ ಪೆಟ್ರೋಲ್ ಬಂಕ್ ನಿಂದ ಮನೆಗೆ ತೆರಳುವ ಸಂದರ್ಭ ಏಕಾ ಎಕಿ ಲಾರಿ ಗುದ್ದಿದ್ದು, ಕಾರು ಬಹುತೇಕ ಜಖಂ ಗೊಂಡಿದೆ.

ಲಾರಿ ಕೊಡ್ಲಿಪೇಟೆಯ ಕೆರಗ ನಹಳ್ಳಿ ಗ್ರಾಮದ ಕೆ. ಆರ್ ರಮೇಶ್ ಎಂಬುವವರಿಗೆ ಸೇರಿದ್ದು ಎಂದು ತಿಳಿದು ಬಂದಿದೆ. ವೈಯುಕ್ತಿಕ ಕಾರಣದಿಂದ ಈ ಕೊಲೆ ಯತ್ನ ನಡೆದಿದೆ ಎಂದು ತೇಜಕುಮಾರ್ ಶನಿವಾರಸಂತೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಕಾರಿನ ಏರ್ ಬ್ಯಾಗ್ ತೆರದ ಕಾರಣ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು