12:23 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ತರೀಕೆರೆ: ಟಿಕೆಟ್ ಅನೌನ್ಸ್ ಮೊದಲೇ ಬೀದಿಗಿಳಿದು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ; ಟಯರ್ ಗೆ ಬೆಂಕಿ

08/04/2023, 15:07

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ತರೀಕೆರೆ ಕಾಂಗ್ರೆಸ್ ಟಿಕೆಟ್ ಸಮಸ್ಯೆ ಮತ್ತಷ್ಟು ಜಟಿಲಗೊಂಡಿದೆ. ಟಿಕೆಟ್ ಅನೌನ್ಸ್ ಆಗುವ ಮೊದಲೇ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಲಿಂಗಾಯುತ ಸಮುದಾಯದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆದಿದೆ. ತರೀಕೆರೆ ಕಾಂಗ್ರೆಸ್ ಟಿಕೆಟ್ ಲಿಂಗಾಯತ ಸಮುದಾಯಕ್ಕೆ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.
ದೋರನಾಳು ಪರಮೇಶ್ ಗೆ ಕಾಂಗ್ರೆಸ್
ಟಿಕೆಟ್ ನೀಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಟೈರ್ ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಿಂಗಾಯುತ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಿದ್ರೆ ಗೆಲ್ಲಿಸುತ್ತೇವೆ ಎಂದು ಪ್ರತಿಭಟನಾಕಾರರು ಘೋಷಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯೇ ಕಾಂಗ್ರೆಸ್ ಹೈಕಮಾಂಡ್ ತಲೆನೋವಾಗಿ ಪರಿಣಮಿಸಿದೆ. ತರೀಕೆರೆಯಲ್ಲಿ ಟಿಕೆಟ್ ಗಾಗಿ ಗೋಪಿಕೃಷ್ಣ-ಶ್ರೀನಿವಾಸ್ ನಡುವೆ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ.
ನಿರ್ಣಾಯಕ ಸಮುದಾಯದ ಮುಖಂಡರು ಬೀದಿಗಿಳಿದಿರೋದು ಕೈ ಹೈಗೆ ಮತ್ತಷ್ಟು ಟೆನ್ಷನ್ ಹುಟ್ಟಿಸಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಡೂರು, ತರೀಕೆರೆಯಲ್ಲೂ ಕೈ ಬಂಡಾಯದ ಬಣವೇ ದೊಡ್ಡದಾಗಿದೆ. ಟಿಕೆಟ್ ಅನೌನ್ಸ್ ಆದರೆ ಅಲ್ಲೋಲ-ಕಲ್ಲೋಲ ಗ್ಯಾರಂಟಿ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು