5:50 AM Monday24 - August 2026
ಬ್ರೇಕಿಂಗ್ ನ್ಯೂಸ್
*ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಇತ್ತೀಚಿನ ಸುದ್ದಿ

ಅತ್ತಿಗೆರೆ, ಕೊಟ್ಟಿಗೆಹಾರ ಸುತ್ತಮುತ್ತ ಕಾಡುಕೋಣಗಳ ಹಾವಳಿ, ಅರಣ್ಯ ಅಧಿಕಾರಿಗಳಿಂದ ಕೂಂಬಿಂಗ್ ಕಾರ್ಯಾಚರಣೆ

02/11/2023, 11:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದ ದೇವನಗೂಲ್, ಅತ್ತಿಗೆರೆ ಸುತ್ತಮುತ್ತಲಿನ ಕಾಫಿ ತೋಟಗಳಲ್ಲಿ ನಿತ್ಯ ಕಾಡುಕೋಣಗಳ ಹಾವಳಿ ಹೆಚ್ಚಾಗಿದ್ದು, ಹಾವಳಿ ನಿಯಂತ್ರಿಸುವಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.


ಬೆಳೆಗಾರರಾದ ಕಾರ್ತಿಕ್ ಅತ್ತಿಗೆರೆ ಮಾತನಾಡಿ ‘ ನಿತ್ಯ ಕಾಫಿ ತೋಟಗಳಲ್ಲಿ ಕಾಡುಕೋಣಗಳು ನಿರ್ಭೀತಿಯಿಂದ ಸಂಚರಿಸುತ್ತಿವೆ. ತೋಟ ಕಾರ್ಮಿಕರು ಕೂಡ ಕೆಲಸಕ್ಕೆ ಬರಲು ಭಯ ಪಡುವಂತಾಗಿದೆ. ಕಾಡಾನೆ, ಹುಲಿಗಳ ಕಾಟದಿಂದ ಈ ಭಾಗದ ಬಣಕಲ್, ಹೆಗ್ಗುಡ್ಲು, ಭಾರತೀಬೈಲ್ ಸುತ್ತಮುತ್ತ ಜನರು ರೋಸಿ ಹೋಗಿದ್ದಾರೆ . ಈಗ ಕಾಡುಕೋಣಗಳ ಹಾವಳಿಯಿಂದ ತೋಟಗಾರಿಕೆ ಕೃಷಿಗೂ ಹೊಡೆತ ಬಿದ್ದಂತಾಗಿದೆ’ ಎಂದರು. ಬುಧವಾರ ಅರಣ್ಯ ಅಧಿಕಾರಿ ಉಪವಲಯ ಅರಣ್ಯಾಧಿಕಾರಿ ಉಮೇಶ್ ನೇತೃತ್ವದ ತಂಡ ಸ್ಥಳಕ್ಕೆ ಆಗಮಿಸಿ ಅತ್ತಿಗೆರೆ, ದೇವನಗೂಲ್ ಸುತ್ತಮುತ್ತ ಗುಡ್ಡದ ತೋಟಗಳಲ್ಲಿ ಪಟಾಕಿ ಸಿಡಿಸಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಪಟಾಕಿ ಸಿಡಿಸಿ ಕಾಡುಕೋಣಗಳನ್ನು ಕಾಡಿಗೆ ಅಟ್ಟಲು ಕಾರ್ಯಾಚರಣೆ ಆರಂಭಿಸಿದರು. ಉಪ ವಲಯ ಅರಣ್ಯ ಅಧಿಕಾರಿ ಉಮೇಶ್,ಗಸ್ತು ಅರಣ್ಯ ಪಾಲಕರಾದ ಮೋಸಿನ್, ಜಯಪ್ಪ ಅರಣ್ಯ ವೀಕ್ಷಕರಾದ ಕೃಷ್ಣಮೂರ್ತಿ ಗಿರೀಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು